For the best experience, open
https://m.samyuktakarnataka.in
on your mobile browser.

ಲವ್ ಜಿಹಾದ್ ತಡೆಗೆ ಸಹಾಯವಾಣಿ

06:18 PM May 29, 2024 IST | Samyukta Karnataka
ಲವ್ ಜಿಹಾದ್ ತಡೆಗೆ ಸಹಾಯವಾಣಿ

ಮಂಗಳೂರು: ಲವ್ ಜಿಹಾದ್ ಪ್ರಕರಣಗಳಿಂದ ಹಿಂದೂ ಯುವತಿಯರು, ಮಹಿಳೆಯರನ್ನು ರಕ್ಷಿಸಲು ಶ್ರೀರಾಮ ಸೇನೆ ವತಿಯಿಂದ ಸಹಾಯವಾಣಿ ಆರಂಭಿಸಲಾಗಿದೆ.
ರಾಜ್ಯಾದ್ಯಂತ ಆರು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಈ ಸಹಾಯವಾಣಿ ಆರಂಭಗೊಂಡಿದ್ದು, ಇಂದಿನಿಂದಲೇ ಕಾರ್ಯಾಚರಣೆ ಆರಂಭಿಸಲಿದೆ.
ಮಂಗಳೂರಿನ ಆರ್ಯಸಮಾಜದಲ್ಲಿ ಸಹಾಯವಾಣಿಗೆ ಚಾಲನೆ ನೀಡಿ ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್, ಲವ್ ಜಿಹಾz ಗೆ ಒಳಪಡುವ ಯುವತಿಯರು, ಮನೆಯವರು ಹಿತೈಷಿಗಳು ಈ ಸಹಾಯವಾಣಿಗೆ ಕರೆ ಮಾಡಿದರೆ ಶ್ರೀರಾಮ ಸೇನೆಯ ತಂಡ ಕಾನೂನಿನ ಮಿತಿಯಲ್ಲಿ ಸೂಕ್ತ ಕಾರ್ಯಾಚರಣೆ ನಡೆಸಲಿದೆ. ಸಹಾಯವಾಣಿ ಮೊಬೈಲ್ ಸಂಖ್ಯೆ ೯೦೯೦೪೪೩೪೪೪ ಇದಾಗಿದ್ದು, ಸಹಾಯವಾಣಿ ತಂಡದಲ್ಲಿ ಮಾಜಿ ಪೊಲೀಸ ಅಧಿಕಾರಿಗಳು ವಕೀಲರ ತಂಡ ಇರಲಿದೆ. ಘಟನೆ ಯಾವ ಹಂತದಲ್ಲಿದೆ ಎಂಬುದನ್ನು ನೋಡಿಕೊಂಡು ಸೂಕ್ತ ಕ್ರಮವನ್ನು ಶ್ರೀರಾಮ ಸೇನೆ ಕೈಗೊಂಡು ಯುವತಿಯರನ್ನು ಮಾತೃ ಧರ್ಮದಲ್ಲಿ ಉಳಿಸಲು ಪ್ರಯತ್ನಿಸಲಾಗುವುದು ಎಂದರು. ಯಾವುದೇ ಕಾರಣಕ್ಕೂ ಕಾನೂನನ್ನು ಮೀರಿ ಹೋಗಲ್ಲ ಹಾಗೂ ಅನೈತಿಕ ಪೊಲೀಸ್ ಗಿರಿ ಮಾಡುವುದಿಲ್ಲ, ಯುವತಿಯರು, ಮಹಿಳೆಯರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದಿದ್ದಾರೆ.