ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಲಿಂಗಾಯತರ ತುಳಿಯುವ ಹುನ್ನಾರ

01:46 PM May 02, 2024 IST | Samyukta Karnataka

ಕಿತ್ತೂರ: ಪ್ರಹ್ಲಾದ ಜೋಶಿ ಅವರಿಂದ ಲಿಂಗಾಯತ ಸಮಾಜ ತುಳಿಯುವ ಕೆಲಸ ಆಗುತ್ತಿದ್ದು, ಲಿಂಗಾಯತರು ಅವರನ್ನು ಕಿತ್ತು ಹಾಕಿದಾಗ ಮಾತ್ರ ಸಮಾಜ ಉಳಿಯಲು ಸಾಧ್ಯ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು.
ಕಿತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲಿಂಗಾಯತ ಸ್ವಾಮೀಜಿಗಳಿಗೆ ದುಡ್ಡು ಕೊಟ್ಟು ಖರೀದಿ ಮಾಡುವ ಷಡ್ಯಂತ್ರ ನಡೆದಿದೆ. ಈ ಕುರಿತು ದಾಖಲೆಗಳಿವೆ. ಇದನ್ನು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದರು. ಲಿಂಗಾಯತರು, ಮುಸ್ಲಿಮರನ್ನು ತುಳಿಯುವುದೇ ಜೋಶಿ ಅವರ ಕೆಲಸವಾಗಿದ್ದು ಅವರನ್ನು ಸೋಲಿಸದಿದ್ದರೆ ಲಿಂಗಾಯತ ಸಮಾಜಕ್ಕೆ ಅರ್ಥವಿಲ್ಲ ಎಂದು ಭಾವುಕರಾದರು. ಹಿಂದಿ ಪ್ರಚಾರ ಸಭಾ ಕಟ್ಟಿದವರು ಯಾರು…? ಅದನ್ನು ಕಿತ್ತುಕೊಂಡಿದ್ದಾರೆ. ನಾನು ಊರಲ್ಲಿ ಇದ್ದರೆ ಕಿತ್ತುಕೊಳ್ಳುವ ಧೈರ್ಯ ಅವರಿಗಿದ್ದಿಲ್ಲ. ಇದನ್ನು ಸಮಾಜ ಅರ್ಥ ಮಾಡಿಕೊಳ್ಳಬೇಕು ಎಂದರು.

Next Article