For the best experience, open
https://m.samyuktakarnataka.in
on your mobile browser.

ವಾಯುಪಡೆಯ ಬೇಹುಗಾರಿಕೆ ವಿಮಾನ ಪತನ

12:03 PM Apr 25, 2024 IST | Samyukta Karnataka
ವಾಯುಪಡೆಯ ಬೇಹುಗಾರಿಕೆ ವಿಮಾನ ಪತನ

ರಾಜಸ್ಥಾನ: ಭಾರತೀಯ ವಾಯುಪಡೆಯ ವಿಚಕ್ಷಣಾ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದೆ.
ಜೈಸಲ್ಮೇರ್ ಜಿಲ್ಲಾ ಕೇಂದ್ರದಿಂದ 30 ಕಿಲೋಮೀಟರ್ ದೂರದಲ್ಲಿರುವ ರೋಜಾನಿ ಕಿ ಧನಿ ಜಜಿಯಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಜಿಲ್ಲಾಡಳಿತ ಹಾಗೂ ವಾಯುಪಡೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು.