For the best experience, open
https://m.samyuktakarnataka.in
on your mobile browser.

ವಿಜಯೇಂದ್ರ, ಅಶೋಕ್, ಬೊಮ್ಮಾಯಿ ತುಂಗಭದ್ರಾ ಜಲಾಶಯ ವೀಕ್ಷಣೆ

02:20 PM Aug 12, 2024 IST | Samyukta Karnataka
ವಿಜಯೇಂದ್ರ  ಅಶೋಕ್  ಬೊಮ್ಮಾಯಿ ತುಂಗಭದ್ರಾ ಜಲಾಶಯ ವೀಕ್ಷಣೆ

ಕೊಪ್ಪಳ: ತಾಲ್ಲೂಕಿನ ಮುನಿರಾಬಾದ್ ಬಳಿಯ ತುಂಗಭದ್ರಾ ಜಲಾಶಯಕ್ಕೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ, ಕಿತ್ತುಹೋದ ೧೯ನೇ ಕ್ರಸ್ಟ್ ಗೇಟನ್ನು ಪರಿಶೀಲಿಸಿದರು.

ಕ್ರಸ್ಟ್ ಗೇಟ್ ಹಾಗೂ ತುಂಗಭದ್ರಾ ಜಲಾಶಯದ ಕುರಿತು ಬಿಜೆಪಿ ನಾಯಕರು ಮಾಹಿತಿ ಪಡೆದರು.

ವಿಧಾನಸಭೆಯ ವಿರೋಧ ಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ್, ಎಂಎಲ್ಸಿ ಹೇಮಲತಾ ನಾಯಕ್, ಮಾಜಿ ಸಚಿವರಾದ ಹಾಲಪ್ಪ ಆಚಾರ್, ಆನಂದ್ ಸಿಂಗ್, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ, ಜೆಡಿಎಸ್ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ್, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್ ಇದ್ದರು.