For the best experience, open
https://m.samyuktakarnataka.in
on your mobile browser.

ವಿಜಯೇಂದ್ರ ಆಯ್ಕೆ: ಯುವ ನಾಯಕತ್ವಕ್ಕೆ ಹೈಕಮಾಂಡ್ ನೀಡಿದ ಮನ್ನಣೆ

03:56 PM Nov 12, 2023 IST | Samyukta Karnataka
ವಿಜಯೇಂದ್ರ ಆಯ್ಕೆ  ಯುವ ನಾಯಕತ್ವಕ್ಕೆ ಹೈಕಮಾಂಡ್ ನೀಡಿದ ಮನ್ನಣೆ

ಹುಬ್ಬಳ್ಳಿ: ಬಿಜೆಪಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬಿ.ವೈ ವಿಜಯೇಂದ್ರ ಅವರ ಆಯ್ಕೆ ಅತ್ಯಂತ ಸೂಕ್ತ. ನಮ್ಮ ರಾಷ್ಟ್ರೀಯ ನಾಯಕರು ಯುವಕರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅತ್ಯಂತ ಸೂಕ್ತ ನಿರ್ಧಾರ ಕೈಗೊಂಡಿದೆ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ರವಿವಾರ ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರನ್ನು ನಾನು ಅಭಿನಂಧಿಸುತ್ತೇನೆ. ವಿಜಯೇಂದ್ರ ನಾಯಕತ್ವದಲ್ಲಿ, ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷವನ್ನು ಗಟ್ಟಿಗೊಳಿಸುತ್ತೇವೆ. ಮೋದಿಯವರು ದೇಶಕ್ಕೆ ಮಾಡಿರುವ ಕೆಲಸ, ಜನ ಕಲ್ಯಾಣ ಕಾರ್ಯಗಳಿಂದ ಲೋಕಸಭೆಯಲ್ಲಿ ೨೫ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ವಿಜಯೇಂದ್ರ ನೇತೃತ್ವದಲ್ಲಿ ನಾವೆಲ್ಲಾ ಒಂದಾಗಿ ಕೆಲಸ ಮಾಡುತ್ತೇವೆ. ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದರು.
ಮಾಜಿ ಸಿಎಂ ಯಡಿಯೂರಪ್ಪ ಅವರು ಪಕ್ಷಾತೀತ ನಾಯಕರು. ಬಿಎಸ್‌ವೈ ಅವರು ಲಿಂಗಾಯತರಿಗೆ ಮಾತ್ರವಲ್ಲ ಎಲ್ಲ ಸಮಾಜದವರೂ ಅವರನ್ನು ಹೆಚ್ಚು ಬೆಂಬಲಿಸಿದ್ದಾರೆ ಎಂದು ಹೇಳಿದರು.