ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ-ಇಬ್ಬರ ಸಾವು

03:53 PM May 06, 2024 IST | Samyukta Karnataka

ಬಾಳೆಹೊನ್ನೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಎನ್.ಆರ್.ಪುರ ತಾಲೂಕಿನ ಕರಗುಂದ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಅಪಘಾತದಲ್ಲಿ ಕಳಸ ತಾಲೂಕು ಹೊರನಾಡು ಮೂಲದ ಇಬ್ಬರು ಯುವಕರು ಮೃತಪಟ್ಟಿರುತ್ತಾರೆ. ಹೊರನಾಡು ಸಮೀಪದ ಮುಂಡುಗದ ಮನೆ ಗ್ರಾಮದ ಸುನಿಲ್ ಹಾಗೂ ಹಾಸನ ಮೂಲದ ಉಮೇಶ್ ಮೃತಪಟ್ಟ ಯುವಕರು.
ಇವರಿಬ್ಬರು ಹೊರನಾಡಿನ ವಸತಿಗೃಹ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸೋಮವಾರ ಮುಂಜಾನೆ ತನ್ನ ಬೈಕ್ ಸರ್ವಿಸ್ ಗೆಂದು ಸುನಿಲ್ ಉಮೇಶ್ ನೊಂದಿಗೆ ಶಿವಮೊಗ್ಗಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಬಾಳೆಹೊನ್ನೂರು ಎನ್.ಆರ್.ಪುರ ರಸ್ತೆಯಲ್ಲಿ ಕರಗುಂದ ಗ್ರಾಮದ ಸಮೀಪ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಇಬ್ಬರು ಯುವಕರು ತೀವ್ರ ಪೆಟ್ಟಿನಿಂದ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಈ ಇಬ್ಬರು ಯುವಕರು ತಲೆಗೆ ಹೆಲ್ಮಟ್ ಧರಿಸಲಿಲ್ಲ ಎಂದು ತಿಳಿದುಬಂದಿದೆ.

Next Article