For the best experience, open
https://m.samyuktakarnataka.in
on your mobile browser.

ವಿಪಕ್ಷ ನಾಯಕನಾಗಿ ಆರ್‌.ಅಶೋಕ್‌ ಆಯ್ಕೆ

08:05 PM Nov 17, 2023 IST | Samyukta Karnataka
ವಿಪಕ್ಷ ನಾಯಕನಾಗಿ ಆರ್‌ ಅಶೋಕ್‌ ಆಯ್ಕೆ

ಬೆಂಗಳೂರು: ಒಕ್ಕಲಿಗ ನಾಯಕ ಆರ್‌. ಆಶೋಕ ಅವರನ್ನು ವಿಪಕ್ಷ ನಾಯಕನನ್ನಾಗಿ ಬಿಜೆಪಿ ಘೋಷಿಸಿದೆ.
ನಗರದ ಐಟಿಸಿ ಗಾರ್ಡೇನಿಯಾ ಹೋಟೆಲ್​ನಲ್ಲಿ ನಡೆದ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಈ ನಿರ್ಧಾರ ಕೈಗೊಳ್ಳಲಾಯಿತು. ಹೈಕಮಾಂಡ್​ನ ವೀಕ್ಷಕರಾಗಿ ನಿರ್ಮಲಾ ಸೀತಾರಾಮನ್ ಮತ್ತು ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು.