For the best experience, open
https://m.samyuktakarnataka.in
on your mobile browser.

ವಿಪಕ್ಷ ನಾಯಕನ ಆಯ್ಕೆ: ಬಿಜೆಪಿ ಶಾಸಕಾಂಗ ಸಭೆ ಆರಂಭ

07:48 PM Nov 17, 2023 IST | Samyukta Karnataka
ವಿಪಕ್ಷ ನಾಯಕನ ಆಯ್ಕೆ  ಬಿಜೆಪಿ ಶಾಸಕಾಂಗ ಸಭೆ ಆರಂಭ

ಬೆಂಗಳೂರು: ಪ್ರತಿಪಕ್ಷ ನಾಯಕರ ಆಯ್ಕೆ ಹಿನ್ನೆಲೆ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದೆ.
ನಗರದ ಐಟಿಸಿ ಗಾರ್ಡೇನಿಯಾ ಹೋಟೆಲ್​ನಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಹೈಕಮಾಂಡ್​ನ ವೀಕ್ಷಕರಾಗಿ ನಿರ್ಮಲಾ ಸೀತಾರಾಮನ್ ಮತ್ತು ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದಾರೆ.
ಸಭೆ ಆರಂಭಕ್ಕೂ ಮುನ್ನ ಹೋಟೆಲ್​ಗೆ ಬಂದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಅಲ್ಲಿಂದ ನಿರ್ಗಮಿಸಿದ್ದು, ಶಾಸಕಾಂಗ ಸಭೆ ಆರಂಭವಾದರೂ ಮತ್ತೆ ವಾಪಸ್​ ಆಗಿಲ್ಲ. ಎಸ್.ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕೂಡ ಸಭೆಗೆ ಗೈರಾಗಿದ್ದಾರೆ.
ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿ ವೀಕ್ಷಕರು ವರದಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ದೂರವಾಣಿ ಮೂಲಕ ಸಲ್ಲಿಕೆ ಮಾಡಲಿದ್ದು, ನಡ್ಡಾ ಇಂದು ರಾತ್ರಿಯೇ ಹೆಸರು ಪ್ರಕಟಿಸಲಿದ್ದಾರೆ ಎಂದು ಆರ್‌. ಆಶೋಕ ತಿಳಿಸಿದ್ದಾರೆ.