ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿಪಕ್ಷ ನಾಯಕನ ಆಯ್ಕೆ: ಬಿಜೆಪಿ ಶಾಸಕಾಂಗ ಸಭೆ ಆರಂಭ

07:48 PM Nov 17, 2023 IST | Samyukta Karnataka

ಬೆಂಗಳೂರು: ಪ್ರತಿಪಕ್ಷ ನಾಯಕರ ಆಯ್ಕೆ ಹಿನ್ನೆಲೆ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದೆ.
ನಗರದ ಐಟಿಸಿ ಗಾರ್ಡೇನಿಯಾ ಹೋಟೆಲ್​ನಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಹೈಕಮಾಂಡ್​ನ ವೀಕ್ಷಕರಾಗಿ ನಿರ್ಮಲಾ ಸೀತಾರಾಮನ್ ಮತ್ತು ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದಾರೆ.
ಸಭೆ ಆರಂಭಕ್ಕೂ ಮುನ್ನ ಹೋಟೆಲ್​ಗೆ ಬಂದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಅಲ್ಲಿಂದ ನಿರ್ಗಮಿಸಿದ್ದು, ಶಾಸಕಾಂಗ ಸಭೆ ಆರಂಭವಾದರೂ ಮತ್ತೆ ವಾಪಸ್​ ಆಗಿಲ್ಲ. ಎಸ್.ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕೂಡ ಸಭೆಗೆ ಗೈರಾಗಿದ್ದಾರೆ.
ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿ ವೀಕ್ಷಕರು ವರದಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ದೂರವಾಣಿ ಮೂಲಕ ಸಲ್ಲಿಕೆ ಮಾಡಲಿದ್ದು, ನಡ್ಡಾ ಇಂದು ರಾತ್ರಿಯೇ ಹೆಸರು ಪ್ರಕಟಿಸಲಿದ್ದಾರೆ ಎಂದು ಆರ್‌. ಆಶೋಕ ತಿಳಿಸಿದ್ದಾರೆ.

Next Article