For the best experience, open
https://m.samyuktakarnataka.in
on your mobile browser.

ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲಿ ಅಸಮಾಧಾನವಿಲ್ಲ

12:31 PM Nov 18, 2023 IST | Samyukta Karnataka
ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲಿ ಅಸಮಾಧಾನವಿಲ್ಲ

ಹುಬ್ಬಳ್ಳಿ: ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತ ಗೆಲವು ಸಾಧಿಸಲಿ ಎಂದು ಶಾಸಕ ಮಹೇಶ ಟೆಂಗಿನಕಾಯಿ ಶುಭ ಹಾರೈಸಿದರು.
ನಗರದ ನೆಹರು ಮೈದಾನಲ್ಲಿ ಅಭಿಮಾನಿಗಳೊಂದಿಗೆ ಕ್ರಿಕೆಟ್ ಆಡುವ ಮೂಲಕ ಭಾರತ ತಂಡಕ್ಕೆ ಶುಭ ಕೋರಿದರು.
ನಾಳೆ ಆಸ್ಟ್ರೇಲಿಯಾ vs ಭಾರತ ನಡುವೇ ಫೈನಲ್ ಪಂದ್ಯ ನಡೆಯಲಿದೆ. ಈ‌ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಲಿದೆ. ಈಗಾಗಲೇ 10 ಪಂದ್ಯಗಳಲ್ಲಿ ಭಾರತ ಗೆದ್ದಿದೆ. ನಾಳಿನ ಪಂದ್ಯದಲ್ಲಿ ಸಹ ಭಾರತ ಗೆಲ್ಲುತ್ತದೆ. ರೋಹಿತ್ ಶರ್ಮಾ ನೇತೃತ್ವದಲ್ಲಿನ ತಂಡ ಒಳ್ಳೆಯ ಆಟ ಆಡಲಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲಿಯೂ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ಬಾಲಿಂಗ್ , ಬ್ಯಾಟಿಂಗ್ ಹಾಗೂ ಕಿಪ್ಪಿಂಗ್ ನಲ್ಲಿ ಅದ್ಬುತವಾದ ಆಟವನ್ನು ಆಡುತ್ತಿದ್ದು, ನಾಳೆ ವಿಶ್ವಕಪ್ ಕಿರೀಟವನ್ನು ಭಾರತ ಧರಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ವಿರೋಧ ಪಕ್ಷದ ನಾಯಕನ ಆಯ್ಕೆ ಗೆ ಶಾಸಕರ ಅಪಸ್ವರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಭಾರತೀಯ ಜನತಾ ಪಕ್ಷದ ಹಿರಿಯ ಕಿರಿಯ ಶಾಸಕರ ಅಭಿಪ್ರಾಯ ಸಂಗ್ರಹಿಸಿ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಲಾಗಿದೆ.
ಬೆಳಿಗ್ಗೆ ಮೊದಲು ಶಾಸಕರನ್ನ ಪ್ರತ್ಯೇಕವಾಗಿ ಮಾತನಾಡಿಸಲಾಗಿದೆ. ವೀಕ್ಷಕರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ ಗೌತಮ ಆಗಮಿಸಿದ್ದರು. ಯಾವುದೇ ಭಿನ್ನಾಭಿಪ್ರಾಯ ಬರದಂತೆ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದೆ.
ಶಾಸಕರ ಅಭಿಪ್ರಾಯ ಸಂಗ್ರಹಿಸಿ ಕೇಂದ್ರದ ಹಿರಿಯ ನಾಯಕರಿಗೆ ರವಾನೆ ಮಾಡಲಾಗಿದೆ. ವಿರೋಧ ಪಕ್ಷದ ನಾಯಕನ ಆಯ್ಕೆ ಮೊದಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಯ ಮಂಡನೆ ಮಾಡಿದರು. ಎಲ್ಲ ಶಾಸಕರು ಇದಕ್ಕೆ ವಿರೋಧ ಮಾಡದೇ ಅನುಮೋದನೆ ನೀಡಿದರು. ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ
ಇದರೊಂದಿಗೆ ಹಿರಿಯ ಶಾಸಕರಾದ ಆರ್ ಅಶೋಕ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದರು. ಸತತವಾಗಿ ಏಳು ಸಲ ಶಾಸಕರಾಗಿ ಆಯ್ಕೆಯಾದವರು. ಹಿರಿಯ ಶಾಸಕರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಾಯಕರಾಗಿದ್ದು, ಆರ್ . ಅಶೋಕ ನೇತೃತ್ವದಲ್ಲಿ ರಾಜ್ಯದ ಆಡಳಿತ ವೈಖರಿ ಕುರಿತು ಪ್ರಶ್ನೆ ಮಾಡಲಾಗುವದು. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ ಯಾವುದೇ ಜನಪರ ಕೆಲಸ ಆಗತಾ ಇಲ್ಲ.
ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಸಮರ್ಥವಾಗಿ ಮಾತನಾಡುತ್ತೇವೆ.ಯಾವುದೇ ರೀತಿಯ ಸರ್ಕಾರದ ಪರ ಸಾಪ್ಟ್ ಕಾರ್ನರ್ ಇಲ್ಲ ಎಂದರು.