For the best experience, open
https://m.samyuktakarnataka.in
on your mobile browser.

ಶಾಲಾ ಬಸ್-ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ: ನಾಲ್ವರು ಮಕ್ಕಳು ಸಾವು

09:08 AM Jan 29, 2024 IST | Samyukta Karnataka
ಶಾಲಾ ಬಸ್ ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ  ನಾಲ್ವರು ಮಕ್ಕಳು ಸಾವು

ಬಾಗಲಕೋಟೆ: ಸ್ಕೂಲ್ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ದುರ್ಮರಣ ಹೊಂದಿದ ಧಾರುಣ ಘಟಬೆ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದ ಸಮೀಪ‌ ಸಂಭವಿಸಿದೆ‌.

ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನುಳಿದ ಮೂವರು ಮಕ್ಕಳು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.

ಶ್ವೇತಾ ಪಾಟೀಲ (16) , ಸಾಗರ ಕಡಕೋಳ (17), ಗೋವಿಂದ ಜಂಬಗಿ (13) & ಬಸವರಾಜ್ ಕೊಟಗಿ (17) ಮೃತ ಮಕ್ಕಳು.

ಆಲಗೂರಿಲ್ಲಿರುವ ವರ್ಧಮಾನ ಶಾಲೆಯ ವಿದ್ಯಾರ್ಥಿಗಳಾಗಿರುವ ಮೃತರು ರವಿವಾರ ಸಂಜೆ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಭಾಗವಹಿಸಿ ಕವಟಗಿ ಗ್ರಾಮದ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕರ ಎಸ್ಪಿ ವೈ.ಅಮರನಾಥ ರೆಡ್ಡಿ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದು, ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.