ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶಿಕಾರಿಪುರ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

11:11 AM Sep 26, 2024 IST | Samyukta Karnataka

ಶಿಕಾರಿಪುರ: ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿರುವುದನ್ನು ಖಂಡಿಸಿ ಶಿಕಾರಿಪುರ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ತಾಲ್ಲೂಕು ಅಹಿಂದ ಒಕ್ಕೂಟದ ಅಹಿಂದ ಸಂಘಟನೆಯ ಕರೆಗೆ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಸ್ಪಂದಿಸಿದ್ದಾರೆ. ತಾಲ್ಲೂಕು ಅಹಿಂದ ಒಕ್ಕೂಟದ ಯುವ ಘಟಕ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜಕಾರಣದಲ್ಲಿ ಬಿಳಿ ಹಾಳೆಯಂತಿರುವ ಸಿದ್ದರಾಮಯ್ಯನವರಿಗೆ ಕಳಂಕ ಅಂಟಿಸಲು ಕುತಂತ್ರ ನಡೆಸಿದ್ದಾರೆ. ಈ ಉದ್ದೇಶಕ್ಕಾಗಿ ಮುಡಾ ಹಗರಣ ಬಳಸಿಕೊಳ್ಳುತ್ತಿದ್ದಾರೆ ಬಿಜೆಪಿ, ಜೆಡಿಎಸ್ ನಾಯಕರ ಕುತಂತ್ರವನ್ನು ಖಂಡಿಸಿ ಬಂದ್‌ಗೆ ಕರೆ ನೀಡಲಾಗಿದೆ. ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ವ್ಯಾಪಾರಸ್ಥರು ಅಂಗಡಿ ಮುಂಗಟ್ಟು ಬಂದ್‌ ಮಾಡಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರು.

Tags :
#ಕಾಂಗ್ರೆಸ್‌#ಬಂದ್#ಬಿಜೆಪಿ#ಶಿಕಾರಿಪುರ#ಶಿವಮೊಗ್ಗ#ಸಿದ್ದರಾಮಯ್ಯ
Next Article