ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶಿವಸೇನೆ ನಾಯಕ ಸಂಜಯ್ ರಾವತ್‌ಗೆ ಜೈಲು ಶಿಕ್ಷೆ

01:32 PM Sep 26, 2024 IST | Samyukta Karnataka

ಮುಂಬೈ: ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಉದ್ಧವ್ ಬಣ) ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರನ್ನು ದೋಷಿ ಎಂದು ಘೋಷಿಸಿರುವ ಮುಂಬೈನ ಮಝಗಾಂವ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್, 15 ದಿನಗಳ ಸೆರೆವಾಸ ಮತ್ತು ರೂ. 25,000 ದಂಡ ವಿಧಿಸಿದೆ. ಮುಂಬೈನ ಮಝಗಾಂವ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್, ಅವರಿಗೆ 15 ದಿನಗಳ ಸೆರೆವಾಸ ಮತ್ತು ರೂ. 25,000 ದಂಡ ವಿಧಿಸಿದ್ದಾರೆ. ಮೀರಾ ಭಯಂದರ್‌ನಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಗೆ ಸಂಬಂಧಿಸಿದ 100 ಕೋಟಿ ರೂ. ಹಗರಣದಲ್ಲಿ ತಾನು ಮತ್ತು ತನ್ನ ಪತಿ ಭಾಗಿಯಾಗಿದ್ದಾರೆ ಎಂದು ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ರಾವತ್ ಮಾಡಿದ್ದಾರೆ ಎಂದು ಆರೋಪಿಸಿ ಮೇಧಾ ಸೋಮಯ್ಯ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಜನಸಾಮಾನ್ಯರ ಮುಂದೆ ನನ್ನ ವರ್ಚಸ್ಸು ಹಾಳು ಮಾಡಲು ಆರೋಪ ಮಾಡಲಾಗಿದೆ ಎಂದು ಆರೋಪಿಸಿ ಮೇಧಾ ಸೋಮಯ್ಯ ಅವರು ಸಂಜಯ್ ರಾವತ್ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು.

Tags :
#BJPLeader#Defamation#DefamationCase#KirtiSomaiya#MaharashtraPolitics#MedhaSomaiya#MetropolitanCourt#politics#SanjayRaut#ShivsenaUBT#ಅಪರಾಧ
Next Article