ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶೀಘ್ರ ಸರ್ವೇಯರ್ ನೇಮಕ

01:56 PM Jan 31, 2024 IST | Samyukta Karnataka

ಹುಬ್ಬಳ್ಳಿ : ಸರ್ವೇಯರ್ ಕೊರತೆ ಬಹಳ ದಿನಗಳಿಂದ ಇತ್ತು. ಪರಿಹಾರ ಕಂಡುಕೊಳ್ಳಲು ಸರ್ವೇಯರ್ ನೇಮಕಾತಿ ಮಾಡಿಕೊಳ್ಳುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.
750 ಪರವಾನಗಿ ಪಡೆದ ಸರ್ವೇಯರ್ ಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಇವರನ್ನು ಯಾವ್ಯಾವ ತಾಲೂಕಿನಲ್ಲಿ ಸರ್ವೇ ಕಾರ್ಯ ಹೆಚ್ಚು ಪೆಂಡಿಂಗ್ ಇದೆಯೋ ಅಂತಹ ತಾಲೂಕಿಗೆ ಹಂಚಿಕೆ ಮಾಡಲಾಗುವುದು ಎಂದರು.
ರಾಜ್ಯ ಸರ್ಕಾರವೇ ಪ್ರಥಮ ಹಂತದಲ್ಲಿ 357 ಸರ್ಕಾರಿ ಸರ್ವೇಯರ್ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಕೆಪಿಎಸ್ ಸಿಯೊಂದಿಗೆ ಮಾತುಕತೆ ನಡೆಸಿ ಶೀಘ್ರ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು. ಇದಾದ ಬಳಿಕ 2 ಹಂತದಲ್ಲಿ 592 ಸರ್ವೇಯರ್ ನೇಮಕ ಮಾಡಿಕೊಳ್ಳಲಾಗುತ್ತದೆ. ಮುಖ್ಯಮಂತ್ರಿಯವರೂ ಒಪ್ಪಿಗೆ ಸೂಚಿಸಿದ್ದಾರೆ ಎಂದರು. ಈ ಪ್ರಕ್ರಿಯೆಯಿಂದ ಒಟ್ಟಾರೆ ಸರ್ವೇ ಇಲಾಖೆಯಲ್ಲಿದ್ದ ಸರ್ವೇಯರ್ ಕೊರತೆ ಎರಡು ವರ್ಷದಲ್ಲಿ ಬಹುತೇಕ ನೀಗಲಿದೆ ಎಂದು ತಿಳಿಸಿದರು.

Next Article