ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶೃಂಗೇರಿ ಶಾರದಾ ಪೀಠದಿಂದ ವಸ್ತ್ರಸಂಹಿತೆ ಜಾರಿ

01:24 PM Jul 24, 2024 IST | Samyukta Karnataka

ಚಿಕ್ಕಮಗಳೂರು: ಶೃಂಗೇರಿ ಶಾರದಾಂಭೆ ಹಾಗೂ ಗುರುಗಳ ದರ್ಶನಕ್ಕೆ ದೇವಸ್ಥಾನ ಆಡಳಿತ ಮಂಡಳಿ ವಸ್ತ್ರಸಂಹಿತೆ ವಿಧಿಸಿರುವುದನ್ನು ಸ್ವಾಗತಿಸಿ ಪುರೋಹಿತ ವರ್ಗ ಮಠದ ಆಡಳಿತ ಮಂಡಳಿ ಆಡಳಿತಾಧಿಕಾರಿ ಮುರಳಿ ಅವರನ್ನು ಅಭಿನಂದಿಸಿದ್ದಾರೆ.
ಆಡಳಿತಾಧಿಕಾರಿಗೆ ಅಭಿನಂದನಾ ಪತ್ರ ನೀಡಿ ಅಭಿನಂದಿಸಿದ ಪುರೋಹಿತ ವರ್ಗದವರು, ಶೃಂಗೇರಿ ಹಿಂದೂಗಳ ಪಾಲಿನ ಪರಮ‌ ಪವಿತ್ರ ಭೂಮಿ. ಗುರು ಪರಂಪರೆಯಲ್ಲಿ ತನ್ನದೆಯಾದ ವೈಶಿಷ್ಟ್ಯತೆಯಿಂದ ಕೂಡಿರೋ ಹಿಂದೂಗಳ ಧಾರ್ಮಿಕ ಶ್ರದ್ಧ ಕೇಂದ್ರ ದೇವಾಲಯದಲ್ಲಿ ಧಾರ್ಮಿಕ ವಾತಾವರಣ ಕಾಯುವ ನಿರ್ಧಾರಕ್ಕೆ ಅಭಿನಂದನೆ‌ ಸಲ್ಲಿಸುವುದಾಗಿ ಶೃಂಗೇರಿ, ಕೊಪ್ಪ, ನರಸಿಂಹ ರಾಜಪುರ ಪುರೋಹಿತ ವರ್ಗದವರು ತಿಳಿಸಿದರು.

Next Article