ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶೆಟ್ಟರ್‌ಗೆ ಬೆಳಗಾವಿ ಟಿಕೆಟ್ ಖಚಿತ

11:07 PM Mar 18, 2024 IST | Samyukta Karnataka

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಬೆಳಗಾವಿಯಿಂದ ಟಿಕೆಟ್ ನೀಡಲು ಪಕ್ಷದ ರಾಷ್ಟ್ರೀಯ ವರಿಷ್ಠರು ಹಸಿರು ನಿಶಾನೆ ನೀಡಿದ್ದಾರೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿರುವ ಶೆಟ್ಟರ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ವೇಳೆ ಪಕ್ಷದ ವರಿಷ್ಠರು ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಶೆಟ್ಟರ್‌ಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಬೆಳಗಾವಿಯಲ್ಲಿ ಸ್ಥಳೀಯವಾಗಿ ಕೆಲವು ಮುಖಂಡರು ವಿರೋಧ ವ್ಯಕ್ತಪಡಿಸಿರುವ ಬಗೆಗೂ ಮಾತುಕತೆ ವೇಳೆ ಚರ್ಚೆಗೆ ಬಂದಿದ್ದು, ಈ ಬಗ್ಗೆ ಯಾವುದೇ ಚಿಂತೆ ಬೇಡ. ಪಕ್ಷ ಈಗಾಗಲೇ ಭರವಸೆ ನೀಡಿದಂತೆ ಬೆಳಗಾವಿಯಿಂದ ಟಿಕೆಟ್ ನೀಡಲಿದೆ. ಹೀಗಾಗಿ ಕ್ಷೇತ್ರಕ್ಕೆ ತೆರಳಿ ಪ್ರಚಾರ ಸಭೆ ನಡೆಸುವಂತೆ ನಿರ್ದೇಶನ ನೀಡಿದೆ ಎಂದು ಮೂಲಗಳು ಹೇಳಿವೆ.

Next Article