ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶ್ರೀರಂಗಪಟ್ಟಣದಲ್ಲಿ ಹುಲಿ ಪ್ರತ್ಯಕ್ಷ: ಜನರಲ್ಲಿ ಆತಂಕ

06:04 PM Jan 16, 2024 IST | Samyukta Karnataka

ಶ್ರೀರಂಗಪಟ್ಟಣ: ತಾಲೂಕಿನ ಅರಕೆರೆ ಗ್ರಾಮ ಹಾಗೂ ಮಹದೇವಪುರ ಗ್ರಾಮಗಳ ಬಳಿ ಹುಲಿಯೊಂದು ಪ್ರತ್ಯಕ್ಷಗೊಂಡಿದ್ದು, ಈ ಭಾಗದ ಜನತೆ ಭಯಭೀತಗೊಂಡಿದ್ದಾರೆ.
ತಕ್ಷಣ ಕಾರ್ಯಾಚರಣೆ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದು, ಗ್ರಾಮಸ್ಥರು ಸಂಚರಿಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಮಲಗಿದ್ದ ಬೃಹತ್ ಗಾತ್ರದ ಹುಲಿಯೊಂದು ವಾಹನದ ಶಬ್ದ ಗ್ರಹಿಸಿ ಪಕ್ಕದ ಜಮೀನಿಗೆ ನುಗ್ಗಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಇಷ್ಟು ದಿನ ಬೀದಿ ನಾಯಿ, ಹಂದಿ ಹಾವಳಿ ಹಾಗೂ ಚಿರತೆ ಪ್ರತ್ಯಕ್ಷದಂತಹ ದೃಶ್ಯಗಳನ್ನು ಕಂಡಿದ್ದ ಇಲ್ಲಿನ ಜನತೆ ಹುಲಿ‌ ಸಂಚಾರದಿಂದ ದಿಗ್ಭ್ರಾಂತರಾಗಿದ್ದಾರೆ.

Next Article