For the best experience, open
https://m.samyuktakarnataka.in
on your mobile browser.

'ಸಂಯುಕ್ತ ಕರ್ನಾಟಕ'ದ ಮೋಹನ ಹೆಗಡೆ ಸೇರಿ ಹಲವರಿಗೆ ಪ್ರಶಸ್ತಿ ಪ್ರದಾನ

07:16 PM Apr 01, 2024 IST | Samyukta Karnataka
 ಸಂಯುಕ್ತ ಕರ್ನಾಟಕ ದ ಮೋಹನ ಹೆಗಡೆ ಸೇರಿ ಹಲವರಿಗೆ ಪ್ರಶಸ್ತಿ ಪ್ರದಾನ

ಚಿತ್ರದುರ್ಗ: 'ಸಂಯುಕ್ತ ಕರ್ನಾಟಕ' ದಿನಪತ್ರಿಕೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಕಾರ್ಯನಿರ್ವಾಹಕ ಸಂಪಾದಕರಾದ ಮೋಹನ ಹೆಗಡೆ ಅವರಿಗೆ 'ಎಸ್‌ ವಿ ಜಯಶೀಲರಾವ್ ಪ್ರಶಸ್ತಿ' ಹಾಗೂ ಹಿರಿಯ ಪತ್ರಕರ್ತ ಸನತ್ ಕುಮಾರ್ ಬೆಳಗಲಿ ಅವರಿಗೆ 'ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ' ಯನ್ನು ‌ಹಾಗೂ ನಾಮದೇವ ವಾಟಕರ್‌ ಅವರಿಗೆ ಹೆಚ್‌.ಎಸ್‌. ರಂಗಸ್ವಾಮಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಚಿತ್ರದುರ್ಗ ಜಿಲ್ಲೆಯ ಎಸ್.ಆರ್.ಎಸ್ ಕಾಲೇಜು ಆವರಣದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕ್ರಮದಲ್ಲಿ ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ್ ತಗಡೂರು ಸೇರಿದಂತೆ ಇತರರು ಇದ್ದರು.