ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಂವಿಧಾನದ ದುರುಪಯೋಗ ಮಾಡಿದ್ದು ಕಾಂಗ್ರೆಸ್

07:31 PM Sep 27, 2024 IST | Samyukta Karnataka

ಬೆಂಗಳೂರು: “ಭೂತದ ಬಾಯಲ್ಲಿ ಭಗವದ್ಗೀತೆ “ ಇದು ನಿಮಗೇ ಅನ್ವಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮಗೆ ವಾಸ್ತವದ ಇತಿಹಾಸದ ಅರಿವೇ ಇಲ್ಲ ಅನಿಸುತ್ತದೆ… ಸಂವಿಧಾನದ ದುರುಪಯೋಗ ಮಾಡಿದ್ದು ಕಾಂಗ್ರೆಸ್, ಎಮರ್ಜೆನ್ಸಿ ಹೇರಿ ಪ್ರಜಾತಂತ್ರವನ್ನು ಕಗ್ಗೊಲೆ ಮಾಡಿ, ಜನರ ,ಮಾಧ್ಯಮದ ಹಕ್ಕು ದಮನಿಸಿದ್ದು ಇಂದಿರಾ ನೇತೃತ್ವದ ಕಾಂಗ್ರೆಸ್, 91 ಕ್ಕೂ ಹೆಚ್ಚು ಚುನಾಯಿತ ರಾಜ್ಯ ಸರ್ಕಾರಗಳನ್ನು ವಜಾ ಮಾಡಿದ್ದು ನಿಮ್ಮ ಪಕ್ಷ ಅದೂ ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಂಡು! ಭ್ರಷ್ಟಾಚಾರ ಮಾಡಿ ಮೂಡ ಸೈಟುಗಳನ್ನು ಕಬಳಿಸಿ, ಕುಟುಂಬ ಸಮೇತ ಅನ್ಯಾಯ ಮಾಡಿರುವ ನಿಮ್ಮ ಮೇಲೆ ತನಿಖೆಗೆ ಆದೇಶ ನೀಡಿದ್ದ ರಾಜ್ಯಪಾಲರ ನಿರ್ಧಾರವನ್ನು ರಾಜ್ಯದ ಉಚ್ಚ ನ್ಯಾಯಾಲಯವೇ ಎತ್ತಿಹಿಡಿದಿದೆ… ನಿಮಗೆ ನ್ಯಾಯಾಲಯದ ತೀರ್ಪಿನ ಮೇಲೂ ನಂಬಿಕೆ ಇಲ್ಲವೆಂದಲ್ಲವೇ…. ದುರಾಡಳಿತದ ನಿಮ್ಮ ಸರ್ಕಾರದ ಮುಖವಾಡ ಜನರ ಮುಂದೆ ಈಗಾಗಲೇ ಕಳಚಿದೆ. ನಿಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ತನಿಖೆಗೆ ಸಹಕರಿಸಿ ಎಂದಿದ್ದಾರೆ.

Tags :
#CongressScam#MUDAScam#pralhadjoshi #ಪ್ರಲ್ಹಾದಜೋಶಿ#ResignSiddaramaiah#ಸಿದ್ದರಾಮಯ್ಯ
Next Article