For the best experience, open
https://m.samyuktakarnataka.in
on your mobile browser.

ಸಂಸತ್ತಿನಲ್ಲಿ ಭದ್ರತಾ ಲೋಪ: ಕಲಾಪ ನಡೆಯುವಾಗಲೇ ಮೇಲಿನಿಂದ ಜಿಗಿದ ಯುವಕರು

01:41 PM Dec 13, 2023 IST | Samyukta Karnataka
ಸಂಸತ್ತಿನಲ್ಲಿ ಭದ್ರತಾ ಲೋಪ  ಕಲಾಪ ನಡೆಯುವಾಗಲೇ ಮೇಲಿನಿಂದ ಜಿಗಿದ ಯುವಕರು

ನವದೆಹಲಿ: ಸಂಸತ್‌ನಲ್ಲಿ ಭದ್ರತಾ ಲೋಪ ನಡೆದ ಘಟನೆ ನಡೆದಿದೆ, ಲೋಕಸಭೆ ಕಲಾಪ ನಡೆಯುತ್ತಿದ್ದಾಗ ಸಂದರ್ಶಕರ ಗ್ಯಾಲರಿಯಿಂದ ಇಬ್ಬರು ವ್ಯಕ್ತಿಗಳು ಕೆಳಗೆ ಜಿಗಿದು ಸದನದಲ್ಲಿ ಸುತ್ತಲೂ ಓಡಾಡಲಾರಂಭಿಸಿದರು. ಬಳಿಕ ತಮ್ಮ ಕೈಯಲ್ಲಿದ್ದ ಟಿಯರ್ ಗ್ಯಾಸ್ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದರು ಎಂದು ಕೆಲವು ಮೂಲಗಳು ತಿಳಿಸಿವೆ. ಕೂಡಲೇ ಲೋಕಸಭೆಯ ಕಲಾಪವನ್ನು ಸ್ಥಗಿತಗೊಳಿಸಲಾಯಿತು ಮತ್ತು ಸಂಸದರು ಲೋಕಸಭೆಯಿಂದ ಹೊರಬರಲು ಪ್ರಾರಂಭಿಸಿದರು.