ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಚಿವ ಸಂಪುಟ ಸಭೆ ಇಂದು ಮಹತ್ವದ ವಿಷಯಗಳ ಚರ್ಚೆ

12:05 AM Jun 13, 2024 IST | Samyukta Karnataka

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇದೇ ಮೊದಲ ಸಚಿವ ಸಂಪುಟ ಸಭೆ ಗುರುವಾರ ನಡೆಯಲಿದೆ. ಸರ್ಕಾರಿ ನೌಕರರ ಏಳನೇ ವೇತನ ಆಯೋಗ ಶಿಫಾರಸು ಜಾರಿ, ಮತ್ತೆ ಭುಗಿಲೆದ್ದಿರುವ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ, ವಿಧಾನಮಂಡಳದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ, ಸರ್ಕಾರ ಈಗಾಗಲೇ ಸ್ವೀಕರಿಸಿರುವ ಜಾತಿಗಣತಿಗೆ ಸಂಬಂಧಿಸಿದಂತೆ ಪರಾಮರ್ಶೆ ಸಮಿತಿ ರಚನೆ ವಿಷಯಗಳು ಪ್ರಮುಖವಾಗಿ ಚರ್ಚೆಯಾಗುವ ಸಾಧ್ಯತೆ ಇದೆ. ಇದಲ್ಲದೆ ಚುನಾವಣೆಯಲ್ಲಿ ಕ್ಷೇತ್ರಸೋತ ಸಚಿವರ ಭವಿಷ್ಯದ ಬಗ್ಗೆಯೂ ಪ್ರಸ್ತಾಪವಾಗಲಿದ್ದು ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾ ನಕ್ಕೆ ಬದ್ದವಾಗಿರುವಂತೆ ಸಂದೇಶ ರವಾನೆಯಾ ಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಭಾರೀ ಅವ್ಯವಹಾರಕ್ಕೆ ಸಂಬಂಧಿಸಿ ಪರಿಶಿಷ್ಟ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ ಬಳಿಕ ನಡೆಯುತ್ತಿರುವ ಕ್ಯಾಬಿನೆಟ್ ಮೀಟಿಂಗ್ ಇದಾಗಿದೆ.

Next Article