For the best experience, open
https://m.samyuktakarnataka.in
on your mobile browser.

ಸಮಯಕ್ಕೆ ಬಾರದ ಅಂಬ್ಯುಲೆನ್ಸ್: ಮೂರು ತಿಂಗಳ ಮಗು ಸಾವು

12:55 PM Jul 20, 2023 IST | Samyukta Karnataka
ಸಮಯಕ್ಕೆ ಬಾರದ ಅಂಬ್ಯುಲೆನ್ಸ್  ಮೂರು ತಿಂಗಳ ಮಗು ಸಾವು

ಕಾರವಾರ: ಮೂರು ತಿಂಗಳ ಕಂದಮ್ಮನನ್ನು ಆಸ್ಪತ್ರೆಗೆ ಸಾಗಿಸಲು ವೆಂಟಿಲೇಟರ್ ಅಂಬ್ಯುಲೆನ್ಸ್ ಸರಿಯಾದ ಸಮಯಕ್ಕೆ ಸಿಗದ ಹಿನ್ನಲೆಯಲ್ಲಿ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರ ಮೂಲದ ರಾಜೇಶ ಎನ್ನುವವರ ಮಗು ಕಫಾ ಹಿನ್ನಲೆಯಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಲಾಗಿತ್ತು, ಆಸ್ಪತ್ರೆಗೆ ಸಾಗಿಸಲು ವೆಂಟಿಲೇಟರ್ ಅಂಬ್ಯುಲೆನ್ಸ್ ಇಲ್ಲದ ಹಿನ್ನಲೆಯಲ್ಲಿ ಉಡುಪಿ ಆಸ್ಪತ್ರೆಯಿಂದ ವೆಂಟಿಲೇಟರ್ ಇರುವ ಅಂಬ್ಯುಲೆನ್ಸ್‌ಗೆ ಕೊರಿದ್ದರು, ಅಂಬ್ಯುಲೆನ್ಸ್ ಬರುವ ಮುನ್ನವೇ ಮಗು ಮೃತಪಟ್ಟಿದೆ, ಈ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಮುಂದೆ ಪೊಷಕರ ಆಕ್ರಂದನ ಮುಗಿಲುಮುಟ್ಟಿದೆ, ಸ್ಥಳಕ್ಕೆ ಕಾರವಾರ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.