For the best experience, open
https://m.samyuktakarnataka.in
on your mobile browser.

ಸಾಲಭಾದೆ: ರೈತ ಆತ್ಮಹತ್ಯೆ

06:42 PM Mar 14, 2024 IST | Samyukta Karnataka
ಸಾಲಭಾದೆ  ರೈತ ಆತ್ಮಹತ್ಯೆ

ಬೆಳಗಾವಿ: ಸಾಲಬಾಧೆಯಿಂದ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಈಚೆಗೆ ನಡೆದಿದೆ.
ಬಸಪ್ಪ ಫಕೀರಪ್ಪ ಮೊರಬದ (43) ಮೃತ ರೈತ. ಕೂಲಿ ಕೆಲಸ ಮಾಡಿಕೊಂಡಿದ್ದ ಬಸಪ್ಪ ಸನ್ 2019-20ರಲ್ಲಿ ಗ್ರಾಮದಲ್ಲಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 3 ಲಕ್ಷ ರೂ. ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 1 ಲಕ್ಷ ರೂ. ಸಾಲ ಪಡದಿದ್ದ. ಸಾಲ ತೀರಿಸಲಾಗದೇ ಮನನೊಂದು, ಗ್ರಾಮದ ನೀಲಕಂಠಪ್ಪ ಪತ್ತಾರ ಎಂಬುವರ ಪಾಳು ಬಿದ್ದ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ. ಈ ಬಗ್ಗೆ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.