ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಾಲ ಬಾಧೆ: ರೈತ ಆತ್ಮಹತ್ಯೆ

08:43 PM Apr 22, 2024 IST | Samyukta Karnataka

ಕುಳಗೇರಿ ಕ್ರಾಸ್: ಚಿಮ್ಮನಕಟ್ಟಿ ಗ್ರಾಮದ ರೈತ ಲಾಲಸಾಬ ದಾದೇಸಾಬ ಬಹದ್ದೂರಖಾನ್ ವ-೪೨ ಸಾಲದ ಹೊರೆ ತಾಳಲಾರದೆ ತನ್ನ ಮನೇಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯ ಮಾಡಿಕೊಂಡಿದ್ದಾರೆ.

ಎರಡು ಏಕರೆ ಸ್ವಂತ ಜಮಿನು ಹೊಂದಿದ್ದ ರೈತ ಸರಿಯಾದ ಮಳೆ-ಬೆಳೆ ಇಲ್ಲದೆ ಸಾಲಮಾಡಿ ತಿರಿಸಲಾಗದೆ ಮಾನಸೀಕವಾಗಿ ಪರದಾಡುತ್ತಿದ್ದರು ಎಂದು ಪತ್ರಿಕೆಗೆ ತಿಳಿಸಿದ ಮೃತ ರೈತನ ಪತ್ನಿ ಬಿಸ್ಮೀಲ್ಲಾ ನನಗೆ ಇಬ್ಬರು ಮಕ್ಕಳಿದ್ದಾರೆ ಎಂದು ಅಳಲು ತೋಡಿಕೊಂಡರು.

ಕುಳಗೇರಿ ಕ್ರಾಸ್ ಡಿಸಿಸಿ ಬ್ಯಾಂಕ್‌ನಲ್ಲಿ ಜಮಿನು ಮೇಲೆ ಕೃಷಿ ಅಭಿವೃದ್ಧಿಗಾಗಿ ೫೭ ಸಾವಿರ ಕಾಕನೂರ ಎಸ್.ಬಿ.ಐ ಬ್ಯಾಂಕ್ ನಲ್ಲಿ ೧.೪೦ಲಕ್ಷ, ಹಾಗೂ ಕೈ ಸಾಲ ಸೇರಿದಂತೆ ಸಂಘಗಳಲ್ಲೂ ಸಾಲಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿ ಈ ಕುರಿತು ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Next Article