ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಾವಿನಲ್ಲೂ ಒಂದಾದ ದಂಪತಿ

07:31 PM Sep 23, 2024 IST | Samyukta Karnataka

ಹುಬ್ಬಳ್ಳಿ: ಅವರಿಬ್ಬರು ಸಂಸಾರದಲ್ಲಿ ಕಷ್ಟ ಸುಖ ಕಂಡಿದ್ದ ದಂಪತಿ. ಸುಧೀರ್ಘ ವೈವಾಹಿಕ ಜೀವನದ ನಡೆಸಿದ್ದ ದಂಪತಿ ಸೋಮವಾರ ಇಬ್ಬರೂ ಒಟ್ಟಿಗೆ ಸಾವಿನ ಮನೆ ಕದ ತಟ್ಟಿದ್ದು, ಇಂತಹ ಅಪರೂಪದ ಘಟನೆ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.
ಕುಸುಗಲ್ ಗ್ರಾಮದ ಶಂಕರಪ್ಪ ಹೊಂಬಳ(೭೨) ಹಾಗೂ ಪತ್ನಿ ಅನ್ನಪೂರ್ಣ ಹೊಂಬಳ(೬೨) ಇಬ್ಬರೂ ಸಾವಿನಲ್ಲೂ ಒಂದಾಗಿದ್ದಾರೆ. ಶಂಕರಪ್ಪ ಅವರು ಸೋಮವಾರ ಬೆಳಿಗ್ಗೆ ೬ ಗಂಟೆಗೆ ಹೃದಯಾಘತದಿಂದ ಮೃತಪಟ್ಟಿದ್ದಾರೆ. ಗಂಡನ ಸಾವಿನ ಸುದ್ದಿ ಕೇಳಿ ೧ ಗಂಟೆಯ ಸುಮಾರಿಗೆ ಪತ್ನಿ ಅನ್ನಪೂರ್ಣ ಮೃತಪಟ್ಟಿದ್ದಾರೆ. ಇವರಿಗೆ ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗ ಇದ್ದಾರೆ. ಇವರ ಅಗಲಿಕೆಗೆ ಇಡೀ ಕುಸುಗಲ್ ಗ್ರಾಮಸ್ಥರು ಕಂಬನಿ ಮಿಡಿದಿದ್ದು, ಸಾರ್ವಜನಿಕರು ಪಾರ್ಥಿವ ಶರೀರದ ದರ್ಶನ ಪಡೆದರು.

Tags :
#Deathhubli
Next Article