For the best experience, open
https://m.samyuktakarnataka.in
on your mobile browser.

ಸಾವಿರ ಕೋಟಿ ರೂಪಾಯಿ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ…

02:04 PM Sep 30, 2024 IST | Samyukta Karnataka
ಸಾವಿರ ಕೋಟಿ ರೂಪಾಯಿ  ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ…

ಬೆಂಗಳೂರು: ಪೊಲೀಸ್ ಅಧಿಕಾರಿ ಚಂದ್ರಶೇಖರ್ ಪತ್ರದಲ್ಲಿ ಹಂದಿಗಳ ಜತೆ ಗುದ್ದಾಡುವುದು ಬೇಡ ಎಂದು ಬರ್ನಾಡ್ ಷಾ ಹೇಳಿರುವುದನ್ನು ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಬೆಂಗಳೂರಿಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ್ನಾಡ್ ಷಾ ಹೇಳಿರುವುದನ್ನು ಉಲ್ಲೇಖಿಸಿ ಚಂದ್ರಶೇಖರ್ ಪತ್ರದಲ್ಲಿ ಬರೆದಿದ್ದಾರೆ ಅದನ್ನು ತಮಗೆ ಹೇಳಿದ್ದು ಎಂದು ಏಕೆ ಕುಮಾರಸ್ವಾಮಿಯವರು ತಿಳಿದುಕೊಳ್ಳಬೇಕು ಎಂದು ಪ್ರಶ್ನಿಸಿದ್ದಾರೆ,

ಸರ್ಕಾರ ಅಸ್ಥಿರಕ್ಕೆ ಸಾವಿರ ಕೋಟಿ: ಸರ್ಕಾರ ಅಸ್ಥಿರಕ್ಕೆ ಸಾವಿರ ಕೋಟಿ ರೂಪಾಯಿಗಳನ್ನು ಯಾರು ಇಟ್ಟುಕೊಂಡಿದ್ದಾರೆ ಎಂಬುದು ಗೊತ್ತಿಲ್ಲ. ಸಾವಿರ ಕೋಟಿ ರೂಪಾಯಿ ನಾವು ನೋಡಿಲ್ಲ. ಯಾರು ಇಟ್ಟುಕೊಂಡಿದ್ದಾರೆ ಎಂಬುದನ್ನು ಯತ್ನಾಳ್ ಅವರನ್ನೆ ಕೇಳಬೇಕು, ಸರ್ಕಾರ ಉರುಳಿಸಲು ಸಾವಿರ ಕೋಟಿ ರೂಪಾಯಿ ಎಂದೆಲ್ಲಾ ಹೇಳುವುದು ಅಪರಾಧವಾಗುತ್ತದೆ. ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ಮಾಡಬೇಕಾಗುತ್ತದೆ.

ಸಿದ್ದರಾಮಯ್ಯ ವಿರುದ್ಧ ಇ,ಡಿ.ಗೆ ಪತ್ರ: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸುವಂತೆ ಇಡಿಗಾದರೂ ಬರೆಯಲಿ, ಸಿಬಿಐಗಾದರೂ ಬರೆಯಲಿ, ಅದನ್ನೆಲ್ಲಾ ಕಾನೂನು ನೋಡಿಕೊಳ್ಳುತ್ತದೆ.

Tags :