For the best experience, open
https://m.samyuktakarnataka.in
on your mobile browser.

ಸಿಎಂ ಹಾದಿ ಹಿಡಿದ ಖರ್ಗೆ ಕುಟುಂಬ

10:37 AM Oct 14, 2024 IST | Samyukta Karnataka
ಸಿಎಂ ಹಾದಿ ಹಿಡಿದ ಖರ್ಗೆ ಕುಟುಂಬ

ಬೆಂಗಳೂರು: ಖರ್ಗೆ ಕುಟುಂಬ ಮುಡಾ ಹಗರಣದ ರೂವಾರಿ ಸಿದ್ದರಾಮಯ್ಯನವರ ಹಾದಿಯನ್ನೇ ತುಳಿದಿರುವುದು ಸಾಬೀತಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಖರ್ಗೆ ಅವರ ಕುಟುಂಬದ ಸಿದ್ದಾರ್ಥ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಮಂಜೂರಾಗಿದ್ದ 5 ಎಕರೆ ಸಿಎ ನಿವೇಶನವನ್ನು ಬೇಷರತ್ ಹಿಂದಿರುಗಿಸಿರುವ ನಿಲುವು ಗಮನಿಸಿದರೆ ಅಕ್ರಮ ಮಂಜೂರಾತಿ ಪ್ರಕರಣ ನ್ಯಾಯಾಲಯದ ಮೆಟ್ಟಿಲು ಏರುವ ಮುನ್ನ ಖರ್ಗೆ ಕುಟುಂಬ ಮುಡಾ ಹಗರಣದ ರೂವಾರಿ ಸಿದ್ದರಾಮಯ್ಯನವರ ಹಾದಿಯನ್ನೇ ತುಳಿದಿರುವುದು ಸಾಬೀತಾಗುತ್ತಿದೆ. ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಭ್ರಷ್ಟ ಹಗರಣಗಳಲ್ಲಿ ಭಾಗಿಯಾದವರು ಕರ್ನಾಟಕ ಬಿಜೆಪಿ ನಡೆಸುತ್ತಿರುವ ಹೋರಾಟಗಳಿಗೆ ಮಣಿಯುತ್ತಿರುವುದರ ನಿದರ್ಶನವೂ ಇದಾಗಿದೆ.
ಕಾಂಗ್ರೆಸ್ ಸರ್ಕಾರದ ಸರಣೀ ಭ್ರಷ್ಟಚಾರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸೇರಿದಂತೆ ಭಾಗಿಯಾಗಿರುವ ಅನೇಕರು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವುದನ್ನು ಕಾಲವೇ ಉತ್ತರ ಹೇಳಲಿದೆ. ಆಮಿಷಗಳನ್ನು ಒಡ್ಡಿ ಅಧಿಕಾರಕ್ಕೆ ಬಂದು ಲೂಟಿಯನ್ನೇ ಗುರಿಯಾಗಿಸಿಕೊಂಡಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸುವವರೆಗೂ ಕರ್ನಾಟಕ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದಿದ್ದಾರೆ.

Tags :