ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಿಲ್ವರ್ ಮರವೇರಿದ ಕಾರ್ಮಿಕ: ವಿದ್ಯುತ್ ಶಾಕ್‌ನಿಂದ ಮೃತ

01:30 PM Jun 01, 2024 IST | Samyukta Karnataka

ಚಿಕ್ಕಮಗಳೂರು: ಕಾಫಿತೋಟದಲ್ಲಿ ಸಿಲ್ವರ್ ಮರಗಸಿ ಮಾಡುವ ವೇಳೆ ವಿದ್ಯುತ್ ಶಾಕ್‌ನಿಂದ ಮರದಲ್ಲೆ ಕಾರ್ಮಿಕ ಸಾವನಪ್ಪಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕು ಕುನ್ನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಾರ್ಮಿಕ ಚಂದ್ರಪ್ಪ (45) ವಿದ್ಯುತ್ ಶಾಕ್‌ನಿಂದ ಮೃತಪಟ್ಟಿದ್ದಾರೆ. ಕಾಫಿತೋಟದಲ್ಲಿ ಬೆಳೆದಿರುವ ಸಿಲ್ವರ್ ಮರಗಳು ನೇರವಾಗಿ ಬೆಳೆಯುವ ಉದ್ದೇಶದಿಂದ ಮರಗಸಿ ಮಾಡಲಾಗುತ್ತದೆ.
ಚಂದ್ರಪ್ಪ ಮರಗಸಿ ಮಾಡುವ ವೇಳೆ ತೋಟದ ಮಧ್ಯೆ ಹಾದು ಹೋಗಿರುವ ವಿದ್ಯುತ್ ತಂತಿ ಮೇಲೆ ಮರದ ಕೊಂಬೆ ಸಿಲುಕಿ ವಿದ್ಯುತ್ ಪ್ರವಹಿಸಿ ಮರದಲ್ಲೆ ಮೃತಪಟ್ಟಿದ್ದಾನೆ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Article