For the best experience, open
https://m.samyuktakarnataka.in
on your mobile browser.

ಸುರೇಶ್ ಸಜ್ಜನ್ ನಾಮಪತ್ರ ವಾಪಸ್..?

03:54 PM May 18, 2024 IST | Samyukta Karnataka
ಸುರೇಶ್ ಸಜ್ಜನ್ ನಾಮಪತ್ರ ವಾಪಸ್

ಬೆಂಗಳೂರು: ಸುರೇಶ್ ಸಜ್ಜನ್ ನಾಮಪತ್ರ ವಾಪಸ್ ಪಡೆದು ಎನ್.ಡಿ.ಎ ಅಭ್ಯರ್ಥಿ ಅಮರನಾಥ ಪಾಟೀಲ್ ಅವರನ್ನು ಬೆಂಬಲಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮನವಿ ಮಾಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಪಕ್ಷದ ಮುಖಂಡ ಸುರೇಶ್ ಸಜ್ಜನ್ ಅವರು ಭೇಟಿಯಾದ ಸಂದರ್ಭದಲ್ಲಿ ನಾಮಪತ್ರ ವಾಪಸ್ ಪಡೆದು ಎನ್.ಡಿ.ಎ ಅಭ್ಯರ್ಥಿ ಅಮರನಾಥ ಪಾಟೀಲ್ ಅವರನ್ನು ಬೆಂಬಲಿಸಿ ಅವರ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಲಾಯಿತು. ಈ ವೇಳೆಯ ಮಾತುಕತೆ ಫಲಪ್ರಧವಾಗಿದ್ದು, ಪಕ್ಷದ ನಿರ್ಣಯಕ್ಕೆ ಬದ್ಧರಾಗಿರುವ ಸುರೇಶ್ ಸಜ್ಜನ್ ಅವರು ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲಿದ್ದಾರೆ ಎಂದಿದ್ದಾರೆ.