ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸೆಲ್ಫಿ ತೆಗೆಯುವಾಗ ಪ್ರವಾಸಿಗ ಹೆಬ್ಬೆ ಜಲಪಾತದಲ್ಲಿ ಬಿದ್ದು ಸಾವು

06:18 PM Jun 10, 2024 IST | Samyukta Karnataka

ಚಿಕ್ಕಮಗಳೂರು: ಹೆಬ್ಬೆ ಜಲಪಾತದಲ್ಲಿ ಪ್ರವಾಸಿಗ ಸೆಲ್ಫಿ ತೆಗೆಯುವಾಗ ಬಂಡೆ ಮೇಲಿಂದ ಕಾಲು ಜಾರಿ ಬಿದ್ದು ಸಾವಪ್ಪಿದ್ದಾರೆ.
ಹೈದರಾಬಾದ್ ಮೂಲದ ಯುವಕ ಶ್ರವಣ್ (೨೫) ಸಾವಪ್ಪಿರುವ ವ್ಯಕ್ತಿ.ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್‌ನಿಂದ ಕಾಫಿನಾಡಿನಲ್ಲಿ ಇಬ್ಬರು ಯುವಕರು ಪ್ರವಾಸ ಕೈಗೊಂಡಿದ್ದರು.
ಇಂದು ಬೆಳಿಗ್ಗೆ ಬೈಕ್‌ನಲ್ಲಿ ಹೆಬ್ಬೆ ಫಾಲ್ಸ್‌ಗೆ ತೆರಳಿದ್ದ ಸ್ನೇಹಿತರು ಸೆಲ್ಫಿ ತೆಗೆದುಕೊಳ್ಳುವ ವೇಳೆಯಲ್ಲಿ ಕಾಲು ಜಾರಿ ಬಿದ್ದು ಒಬ್ಬರು ಸಾವಪ್ಪಿದ್ದಾರೆ.ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Article