ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸೇತುವೆ ಜಲಾವೃತ: ೨೦ ಕೀಮೀ ಸುತ್ತುವರೆದು ಸಂಚಾರ

10:18 PM Oct 13, 2024 IST | Samyukta Karnataka

ಕುಳಗೇರಿ ಕ್ರಾಸ್: (ಜಿ.ಬಾಗಲಕೋಟೆ) ಬಾದಾಮಿ ನರಗುಂದ ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವ ಮಲಪ್ರಭಾ ನದಿಯ ಗೋವನಕೊಪ್ಪ ಹಳೆ ಸೇತುವೆ ಹಾಗೂ ಕಿತ್ತಲಿ ಬ್ಯಾರೆಜ್ ಸಂಪೂರ್ಣ ಜಲಾವೃತಗೊಂಡಿದೆ. ಕೆಲವು ಗ್ರಾಮದ ಜನರು ಸುಮಾರು ೨೦ ಕೀಮೀ ಸುತ್ತುವರೆದು ಸಂಚರಿಸುವ ಪರಿಸ್ಥಿತಿ ನಿರ್ಮಾನವಾಗಿದೆ.

ಮಲಪ್ರಭಾ ಜಲಾನಯಣ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು ಜಲಾಶಯದ ಒಳಹರಿವು ಅಧಿಕವಾಗಿದೆ. ನವಿಲುತೀರ್ಥ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಸದ್ಯ ಸಂಪೂರ್ಣ ನೀರನ್ನು ಹೊರ ಬಿಡಲಾಗುತ್ತಿದೆ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಬಾದಾಮಿ ತಹಸಿಲ್ದಾರ ಮಧುರಾಜ ಕೂಡಲಗಿ ಮಾರ್ಗದಶ್ನದಲ್ಲಿ ಕಂದಾಯ ನಿರೀಕ್ಷಕ ವಿ ಎ ವಿಶ್ವಕರ್ಮ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದು ಜನರು ನದಿಯ ಪಾತ್ರಕ್ಕೆ ಹೋಗದಂತೆ ಮುಂಜಾಗೃತ ಕ್ರಮವಾಗಿ ರಸ್ತೆಗಳನ್ನ ಮುಳ್ಳು ಕಂಠಿಗಳಿಂದ ಸಂಚಾರ ಸ್ಥಗಿತಗೊಳಿಸಿದ್ದಾರೆ.

Tags :
#ಬಾಗಲಕೋಟೆ
Next Article