ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸೇವೆಯ ಹೆಸರಲ್ಲಿ ಮತಾಂತರ ಮಾಡಲಾಗಿತ್ತು-ಈಗ ಕಾಯ್ದೆ ಮೂಲಕ ಕಡಿವಾಣ ಹಾಕಲಾಗಿದೆ – ಆರಗ ಜ್ಞಾನೇಂದ್ರ

02:56 PM Sep 16, 2022 IST | Samyukta Karnataka

ಪರಿಷತ್ ನಲ್ಲಿ ಮತಾಂತರ ನಿಷೇಧ ಕಾಯ್ದೆ ಪಾಸ್ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹಳ ಸಂತೋಷ ವಿಚಾರವಿದು. ನಿನ್ನೆ ಮತಾಂತರ ನಿಷೇಧ ಕಾಯ್ದೆ ಪಾಸ್ ಆಗಿದೆ. ಬೆಳಗಾವಿಯ ವಿಧಾನಸಭೆಯಲ್ಲಿ ಬಿಲ್ ಪಾಸ್ ಆಗಿತ್ತು. ಸುಗ್ರೀವಾಜ್ಞೆ ಮೂಲಕ ಕಾಯ್ದೆ ತಂದಿದ್ದೆವು. ಈಗ ಬಿಲ್ ಎರಡು ಸದನದಲ್ಲಿ ಪಾಸ್ ಆಗಿದೆ. ಗೋ ಹತ್ಯೆ , ಮತಾಂತರ ಎರಡು ಪಾಸ್ ಆಗಿದೆ.

ವೈಯಕ್ತಿಕವಾಗಿ ಅತ್ಯಂತ ಸಂತೋಷವಾಗಿದೆ. ನಾನು ಗೃಹ ಸಚಿವನಾಗಿ ಬಿಲ್ ಮಂಡಿಸಿದ್ದೆ, ಹೆಮ್ಮೆ ಆಗುತ್ತಿದೆ. ಹಿಂದೂ ಧರ್ಮದ ಬುಡ ಅಲ್ಲಾಡುತ್ತಿತ್ತು. ಮತಾಂತರ ಮೂಲಕ ಧರ್ಮ ಒಡೆಯಲಾಗಿತ್ತು. ಸೇವೆಯ ಹೆಸರಲ್ಲಿ ಮತಾಂತರ ಮಾಡಲಾಗಿತ್ತು. ಈಗ ಕಾಯ್ದೆ ಮೂಲಕ ಕಡಿವಾಣ ಹಾಕಲಾಗಿದೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಹಿಂದಿನಿಂದ ಮಾಡುತ್ತಿದೆ. ಕಾಂಗ್ರೆಸ್ ಮುಖವಾಡ ಈಗ ಕಳಚಿದೆ ಎಂದು ಹೇಳಿದ್ರು.

Next Article