ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸೈಟುಗಳನ್ನು ವಾಪಸ್ ನೀಡಲಿ

10:28 PM Sep 26, 2024 IST | Samyukta Karnataka

ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟರೆ ಅವರ ಸೀಟಿಗೆ ಯಾರು ಕೂಡಲಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಹೀಗಾಗಿ ಅವರು ರಾಜೀನಾಮೆ ಕೊಡಲಿ ಎಂದು ನಾನು ಹೇಳುವುದಿಲ್ಲ. ಬದಲಾಗಿ ಮುಡಾದ ಸೈಟುಗಳನ್ನು ವಾಪಸ್ ನೀಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯ ಮುಖಂಡ ಎಸ್.ಆರ್. ಹಿರೇಮಠ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಏನಾಗಿದೆ? ಏನಾಗಿಲ್ಲ ಎನ್ನುವ ವಾದ ಬಿಟ್ಟು, ಪಡೆದ ಎಲ್ಲ ಸೈಟುಗಳನ್ನು ಕೂಡಲೇ ವಾಪಸ್ ನೀಡಿ ತಪ್ಪು ತಿದ್ದಿಕೊಳ್ಳಬೇಕು. ಬದಲಾಗಿ ನ್ಯಾಯಾಲಯದಲ್ಲಿ ಅರ್ಜಿ ಹಾಕುವುದು, ಕಾನೂನು ಹೋರಾಟ ಮಾಡುತ್ತೇವೆ ಎನ್ನುವುದನ್ನು ಕೈ ಬಿಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಸಲಹೆಗಾರರನ್ನು ಇಟ್ಟುಕೊಳ್ಳಬೇಕು. ಇಂತಹ ಪ್ರಕರಣಗಳಲ್ಲಿ ಉತ್ತಮ ಸಲಹೆ ನೀಡುವವರನ್ನು ನಂಬಬೇಕೆ ವಿನಃ ದಾರಿ ತಪ್ಪಿಸುವವರಿಂದ ದೂರ ಇರಬೇಕು ಎಂದು ಕಿವಿಮಾತು ಹೇಳಿದರು.

Next Article