ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸೊಸೈಟಿ ಮೂಲಕ ಹೊರಗುತ್ತಿಗೆ ನೌಕರರ ಪೂರೈಕೆ

01:47 PM Sep 21, 2024 IST | Samyukta Karnataka

ಧಾರವಾಡ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸೊಸೈಟಿ ರಚಿಸಲು ಪ್ರಸ್ತಾವನೆ ಕೇಳಲಾಗಿದೆ

ಬೆಂಗಳೂರು: ಹೊರಗುತ್ತಿಗೆ ಕಾರ್ಮಿಕರ ಸೇವೆಗಳನ್ನು ಒದಗಿಸುವ ಸೊಸೈಟಿ'ಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವ ಮಹತ್ವದ ನಿರ್ಧಾರಕ್ಕೆ ನಮ್ಮ ಕಾರ್ಮಿಕ ಇಲಾಖೆ ಮುಂದಾಗಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಪ್ರಸ್ತುತ ಕಲಬುರ್ಗಿ ವಿಭಾಗದ ಬೀದರ್ ಜಿಲ್ಲೆಯಲ್ಲಿ ಮಾತ್ರ ಈ ಮಾದರಿ ಅನುಷ್ಠಾನದಲ್ಲಿತ್ತು. ಈಗ ಇತರ ಮೂರು ವಿಭಾಗಗಳ ಮೈಸೂರು, ಧಾರವಾಡ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಈ ಸೊಸೈಟಿ ರಚಿಸಲು ಪ್ರಸ್ತಾವನೆ ಕೇಳಲಾಗಿದೆ. ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾಗುವ ಈ ಸೊಸೈಟಿಗಳು ಜಿಲ್ಲೆಯ ಕೌಶಲ್ಯಯುತ ಹಾಗೂ ಕೌಶಲ್ಯ ರಹಿತ ನಿರುದ್ಯೋಗಿಗಳಿಗೆ ಕೆಲಸ ನೀಡಲಿವೆ. ಇದರಿಂದ ನಿರುದ್ಯೋಗ ನಿರ್ಮೂಲನೆಯೊಂದಿಗೆ, ಕಾರ್ಮಿಕರ ಆರ್ಥಿಕ ಶಕ್ತಿಯನ್ನು ಹೆಚ್ಚಿಸಿ, ಸಾಮಾಜಿಕ ಭದ್ರತೆ ಒದಗಿಸಲು ಅನುಕೂಲವಾಗಲಿದೆ‌. ಈ ಹಿಂದಿನ ಕಲಾಪದಲ್ಲಿ ಈ ಬಗ್ಗೆ ಚರ್ಚೆಯಾದಾಗ, ಆದಷ್ಟು ಬೇಗ ಎಲ್ಲ ಜಿಲ್ಲೆಗಳಿಗೂ ಈ ಸೊಸೈಟಿಯನ್ನು ವಿಸ್ತರಿಸುವ ಬಗ್ಗೆ ತೀರ್ಮಾನಿಸಲಾಗುವುದೆಂದು ಮಾಹಿತಿ ನೀಡಲಾಗಿತ್ತು. ಅದರಂತೆ ಈ ಮೂರು ಜಿಲ್ಲೆಗಳ ಪ್ರಗತಿ ಪರಿಶೀಲಿಸಿ, ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದಿದ್ದಾರೆ.

Tags :
#ಸಂತೋಷಲಾಡ್‌
Next Article