ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸೋಸಲೆ ಶ್ರೀ ವ್ಯಾಸರಾಜ ಮಠದ ಸುಧಾಮಂಗಳ ಮಹೋತ್ಸವ

09:24 AM Jun 02, 2024 IST | Samyukta Karnataka

ಮೈಸೂರು: ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಸೋಸಲೆ ಶ್ರೀ ವ್ಯಾಸರಾಜ ಮಠ ಮತ್ತು
ಶ್ರೀ ವ್ಯಾಸತೀರ್ಥ ವಿದ್ಯಾಪೀಠ ಹಮ್ಮಿಕೊಂಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವ ಕಾರ್ಯಕ್ರಮ
ಜೂನ್ 2 ರಿಂದ 9ರವರೆಗೆ ಮೈಸೂರಿನಲ್ಲಿ ವಿಜೃಂಭಣೆಯಿಂದ ನೆರವೇರಲಿದೆ. ಸೋಸಲೆ ಶ್ರೀ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಾಡಿನ ಹಲವು ಮಠಾಧೀಶರು, ಸಂತರು, ವಿವಿಧ ರಂಗದ ಗಣ್ಯರು ಭಾಗವಹಿಸಲಿರುವುದು ವಿಶೇಷ. ಇದೇ ಸಂದರ್ಭ ಸೋಸಲೆ ಶ್ರೀಗಳ ಸಹಸ್ರ ಚಂದ್ರದರ್ಶನ ಶಾಂತಿ ಮಹೋತ್ಸವವೂ ಸಂಪನ್ನಗೊಳ್ಳಲಿದೆ.
4 ಜನ ಹಿರಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ

ವಿಠಲ ಧಾಮದ ವ್ಯಾಸ ಮಂಟಪದಲ್ಲಿ ಸಾರ್ವಜನಿಕ ಕಾರ್ಯಕ್ರಮ:

8ರಂದು ಶ್ರೀ ವೇದವ್ಯಾಸ ಪೂಜೆ - ವಾಕ್ಯಾರ್ಥ ಗೋಷ್ಠಿ
ಜೂ. 8ರಂದು ಬೆಳಗ್ಗೆ 6ಕ್ಕೆ ವಿಠಲ ಧಾಮ ಆವರಣದ ಯಜ್ಞ ವರಾಹ ಮಂಟಪದಲ್ಲಿ ಅರಣಿ ಮಥನ, ಗಣಹೋಮ, ನವಗ್ರಹ ಹೋಮ ಚಾಲನೆ ಪಡೆಯಲಿದೆ. ಬೆಳಗ್ಗೆ 9ಕ್ಕೆ ಸೋಸಲೆ ಶ್ರೀ ವಿದ್ಯಾಶ್ರೀಶರಿಂದ ಸುಧಾ ಅನುವಾದ, ಶ್ರೀ ವೇದವ್ಯಾಸ ಪೂಜೆ ನೆರವೇರಲಿದೆ.
ಭಂಡಾರಕೇರಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ, ಕುಕ್ಕೆ ಸುಬ್ರಹ್ಮಣ್ಯದ ಶ್ರೀ ವಿದ್ಯಾಪ್ರಸನ್ನ ತೀರ್ಥರು, ಭೀಮನಕಟ್ಟೆ ಶ್ರೀ ರಘುವರೇಂದ್ರ ತೀರ್ಥರು ಸೇರಿ ಹಲವು ಮಠಾಧೀಶರು ಸಮಾಗಮಗೊಳ್ಳಲಿದ್ದಾರೆ. ಮಧ್ಯಾಹ್ನ 3. 30 ರಿಂದ ವಾಕ್ಯಾರ್ಥ ಗೋಷ್ಠಿ ನಡೆಯಲಿದೆ. ಮಂತ್ರಾಲಯದ ವಿದ್ವಾನ್ ರಾಜ ಎಸ್. ಗಿರಿ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

8 ರಂದು ಸಂತರ ಸಮಾಗಮ
8ರಂದು ಸಂಜೆ ವಿಠಲ ಧಾಮದಲ್ಲಿ 5:30ಕ್ಕೆ ಭವ್ಯ ರಜತ ಸಿಂಹಾಸನದಲ್ಲಿ ಶ್ರೀ ವ್ಯಾಸರಾಜರಿಗೆ ಸಾಂಪ್ರದಾಯಿಕ ದರ್ಬಾರ್ ನಡೆಯಲಿದೆ. ನಂತರ ನಡೆಯುವ ಸಂತರ ಸಮಾಗಮದಲ್ಲಿ ಮಂತ್ರಾಲಯ ಶ್ರೀಗಳು, ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥರು,
ಮುಳಬಾಗಿಲು ಶ್ರೀ ಸುಜಯನಿಧಿ ತೀರ್ಥರು, ಸೋದೆ ಶ್ರೀ ವಿಶ್ವವಲ್ಲಭ ತೀರ್ಥರು, ಬಾಳಗಾರು ಶ್ರೀ ರಾಮಪ್ರಿಯ ತೀರ್ಥರು,
ಭೀಮನ ಕಟ್ಟೆ ಶ್ರೀ ರಘು ವರೇಂದ್ರ ತೀರ್ಥರು, ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ.
ಸುತ್ತೂರು ಶ್ರೀ ಶಿವರಾತ್ರಿ ದೇಶಕೇಂದ್ರ ಸ್ವಾಮೀಜಿ, ಪರಕಾಲ ಮಠದ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಸ್ವಾಮೀಜಿ, ಕಾಗಿನೆಲೆ
ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಅವಧೂತ ದತ್ತಪೀಠದ ಕಿರಿಯ ಶ್ರೀ ದತ್ತ ವಿಜಯಾನಂದ ತೀರ್ಥರು ಉಪಸ್ಥಿತರಿರಲಿದ್ದಾರೆ.
ತಿರುಮಲ ತಿರುಪತಿ ದೇವಸ್ಥಾನಂ ಇಒ ಧರ್ಮಾ ರೆಡ್ಡಿ, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವಿ. ಶ್ರೀಶಾನಂದ,
ನಿವೃತ್ತ ಐಎಎಸ್ ಅಧಿಕಾರಿ ಕೆ. ಜಯರಾಜ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಭಾಗವಹಿಸಲಿದ್ದಾರೆ.

9ರಂದು 72 ಕುಂಡಗಳಲ್ಲಿ ಹೋಮ

Next Article