For the best experience, open
https://m.samyuktakarnataka.in
on your mobile browser.

ಸ್ನಾನಕ್ಕೆಂದು ನದಿಗೆ ತೆರಳಿದ ಯುವಕ ಸಾವು

11:38 AM Apr 16, 2024 IST | Samyukta Karnataka
ಸ್ನಾನಕ್ಕೆಂದು ನದಿಗೆ ತೆರಳಿದ ಯುವಕ ಸಾವು

ಶೃಂಗೇರಿ: ನದಿಯಲ್ಲಿ ಸ್ನಾನಕ್ಕೆಂದು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಯಡದಳ್ಳಿ ಗ್ರಾಮದಲ್ಲಿ ನಡೆದಿದೆ.

ಮರಡಿನ ಬೈಲು ಗ್ರಾಮದ ಸುರೇಶ್ ಹಾಗೂ ಲಕ್ಷ್ಮಿ ಅವರ ಪುತ್ರ ನಿತಿನ್ (23) ನೀರಿನಲ್ಲಿ ಮುಳುಗಿ ಮೃತ ಪಟ್ಟ ಯುವಕ.

ನಿತಿನ್ ಸೇರಿದಂತೆ 6 ಜನ ಯುವಕರ ತಂಡ ಯಡದಳ್ಳಿ ಗ್ರಾಮದ ನಳಿನಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದಾಗ ಆಕಸ್ಮಿಕವಾಗಿ ನದಿಯ ನೀರಿನಲ್ಲಿ ನಿತಿನ್ ಮುಳುಗಿ ಮೃತಪಟ್ಟಿದ್ದಾನೆ.

ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.