ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸ್ವಾಮೀಜಿಗೆ ಬ್ಲಾಕ್‌ಮೇಲ್: ೧ ಕೋಟಿ ರೂ. ಪಂಗನಾಮ..!

03:09 PM Sep 28, 2024 IST | Samyukta Karnataka

ಬಾಗಲಕೋಟೆ: ಎಡಿಜಿಪಿ ಹೆಸರಿನಲ್ಲಿ ಸ್ವಾಮೀಜಿಯೊಬ್ಬರಿಗೆ ಬ್ಲಾಕ್‌ಮೇಲ್ ಮಾಡಿ ೧ ಕೋಟಿ ರೂ.ಗಳನ್ನು ವಸೂಲಿ ಮಾಡಿದ ಘಟನೆ ನಡೆದಿದೆ.
ನಗರದ ಹೊರವಲಯದ ಶ್ರೀಪರಮಹಂಸ ಪರಮಾರೂಢ ಸ್ವಾಮೀಜಿ(೬೩) ವಂಚನೆಗೆ ಒಳಗಾದವರು. ಪ್ರಕರಣ ಸಂಬಂಧ ಜೆಡಿಎಸ್‌ನಲ್ಲಿ ಗುರುತಿಸಿಕೊಂಡಿರುವ ಪ್ರಕಾಶ ಮುಧೋಳ ಸೇರಿ ಇತರ ಓರ್ವನ ಮೇಲೆ ಪ್ರಕರಣ ದಾಖಲಾಗಿದೆ.ತಾನು ಡಿಎಸ್‌ಪಿ ಸತೀಶ್ ಎಂದು ಸ್ವಾಮೀಜಿಗೆ ಫೋನ್ ಮಾಡಿರುವ ಪ್ರಕಾಶ ನಿಮ್ಮ ಬಗ್ಗೆ ಗೃಹ ಸಚಿವರ ಕಚೇರಿಗೆ ಸಾಕಷ್ಟು ದೂರುಗಳು ಬಂದಿವೆ. ನಿನ್ನ ಮಾನ ಹರಾಜು ಹಾಕುತ್ತೇವೆ ನಮ್ಮ ಎಡಿಜಿಪಿ ಅವರಿಗೆ ಹಣ ಕೊಡಬೇಕೆಂದು ಬೇಡಿಕೆಯಿಟ್ಟಿದ್ದಾರೆ ಮುಂದೆ ಮತ್ತೋರ್ವ ಆರೋಪಿ ಎಡಿಜಿಪಿ ಹೆಸರಿನಲ್ಲಿ ಸ್ವಾಮೀಜಿಗೆ ಬೆದರಿಕೆ ಹಾಕಿದ್ದು, ಭಯಗೊಂಡ ಸ್ವಾಮೀಜಿ ಮೊದಲು ೬೧ ಲಕ್ಷ ರೂ. ಹಾಗೂ ನಂತರದಲ್ಲಿ ೩೯ ಲಕ್ಷ ರೂ. ಸೇರಿಸಿ ಒಟ್ಟು ಒಂದು ಕೋಟಿ ರೂ.ಗಳನ್ನು ಕೊಟ್ಟಿದ್ದಾರೆ. ನಂತರವೂ ಆರೋಪಿಗಳು ಹಣಕ್ಕಾಗಿ ಪೀಡಿಸಿದಾಗ ಪೊಲೀಸರ ಮೊರೆ ಹೋಗಿದ್ದಾರೆ. ಬಾಗಲಕೋಟೆ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags :
#bagalkote #ಬಾಗಲಕೋಟೆ#ಕೋಟಿ
Next Article