For the best experience, open
https://m.samyuktakarnataka.in
on your mobile browser.

ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಶ್ರೀಗಳಿಂದ ಸ್ಪಷ್ಟನೆ

11:41 AM Sep 25, 2024 IST | Samyukta Karnataka
ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ  ಶ್ರೀಗಳಿಂದ ಸ್ಪಷ್ಟನೆ

ರಾಯಚೂರು: ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು ನನ್ನ ವಿರುದ್ಧದ ಆರೋಪ ಸುಳ್ಳು ಎಂದ ಶಂಭು ಸೋಮನಾಥ ಶಿವಾಚಾರ್ಯಶ್ರೀಗಳು ತಿಳಿಸಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಸುಲ್ತಾನ್​ಪುರದಲ್ಲಿರುವ ಪ್ರಣವ ಪಂಚಾಕ್ಷರಿ ಗುರುಪೀಠದ ಶಂಭು ಸೋಮನಾಥ ಶಿವಾಚಾರ್ಯಶ್ರೀ ತಮ್ಮ ಮಠದ ಸೇವೆಗೆ ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಸಂತ್ರಸ್ತೆಗೆ ಒತ್ತಡ ಹಾಕಿ 10 ಲಕ್ಷ ನೀಡಿ ಸೆಟ್ಲ್​ಮೆಂಟ್ ಮಾಡಿರುವ ಆರೋಪವನ್ನು ತಳ್ಳಿ ಹಾಕಿದ್ದಾರೆ. ಆ ಮಹಿಳೆಯನ್ನು ಕೆಲಸದಿಂದ ತೆಗೆದು ನಾವೇ ಕಳುಹಿಸಿ ಕೊಟ್ಟಿದ್ದೀವಿ ಎಂದು ತಿಳಿಸಿದ್ದಾರೆ. ಆ ಮಹಿಳೆ ಮಠದ ಗೋಶಾಲೆಯಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಮಠದಲ್ಲಿ ನಮ್ಮ ಭಕ್ತರಿಗೂ ಮತ್ತೆ ಅವರಿಗೂ ಸ್ವಲ್ಪ ಜಗಳ ಆಗಿತ್ತು. ನೀವು ಇಲ್ಲಿರೋದು ಬೇಡವೆಂದು ನಾವೇ ಹೇಳಿ ಕಳುಹಿಸಿ ಕೊಟ್ಟಿದ್ದೀವಿ. ಈ ಬಗ್ಗೆ ಸಿಟ್ಟಾಗಿ ಪೊಲೀಸ್ ಠಾಣೆ ಹೋಗಿರುವ ವಿಚಾರ ಕೂಡ ಗೊತ್ತಾಯಿತು. ಕರೆದು ಬುದ್ದಿಮಾತು ಹೇಳಿ ಸಹ ಕಳುಹಿಸಿ ಕೊಟ್ಟಿದ್ದೀವಿ. ಅದನ್ನ ತಪ್ಪು ಕಲ್ಪನೆ ಮಾಡಿಕೊಂಡು ಅಪಪ್ರಚಾರ ಮಾಡುವುದು ಲಕ್ಷಣವಲ್ಲ. ಸಂತ್ರಸ್ತೆಗೆ ಒತ್ತಡ ತಂದು‌ 10 ಲಕ್ಷ ಹಣ ನೀಡಿ ಸೆಟಲ್ ಮೆಂಟ್ ಮಾಡಿರೊ ಆರೋಪ ಸುಳ್ಳು ಎಂದು ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags :