ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಣದ ಜಾಡು ಎಲ್ಲಿದೆ? ಹಣ ಎಲ್ಲಿಗೆ ಹೋಯಿತು?

11:21 AM Mar 23, 2024 IST | Samyukta Karnataka

ನವದೆಹಲಿ: ಸಿಬಿಐ ಮತ್ತು ಇಡಿ ತನಿಖೆಗಳು ಕಳೆದ ಎರಡು ವರ್ಷಗಳಿಂದ ನಡೆಯುತ್ತಿವೆ. ಈ ಎರಡು ವರ್ಷಗಳಲ್ಲಿ, ಹಣದ ಜಾಡು ಎಲ್ಲಿದೆ? ಹಣ ಎಲ್ಲಿಗೆ ಹೋಯಿತು? ಎಂದು ದೆಹಲಿ ಸಚಿವೆ ಅತಿಶಿ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು ಅರವಿಂದ ಕೇಜ್ರಿವಾಲ್ ಅವರನ್ನು ಕೇವಲ ಒಬ್ಬ ವ್ಯಕ್ತಿಯ ಹೇಳಿಕೆಯ ಆಧಾರದ ಮೇಲೆ ಬಂದಿಸಲಾಗಿದೆ. ಅವರು ಶರತ್ ಚಂದ್ರ ರೆಡ್ಡಿ ಅರಬಿಂದೋ ಫಾರ್ಮಾದ ಮಾಲೀಕರು. ಅವರನ್ನು 2022 ರ ನವೆಂಬರ್ 9 ರಂದು ವಿಚಾರಣೆಗೆ ಕರೆಸಲಾಯಿತು. ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲಿಲ್ಲ ಅಥವಾ ಮಾತನಾಡಲಿಲ್ಲ ಮತ್ತು ಎಎಪಿಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದರು. ಅವರು ಹೇಳಿದ ತಕ್ಷಣ, ಮರುದಿನ ಅವರನ್ನು ಬಂಧಿಸಲಾಯಿತು. ಇಡಿ ಹಲವು ತಿಂಗಳುಗಳ ಕಾಲ ಜೈಲಿನಲ್ಲಿದ್ದ ನಂತರ ಹೇಳಿಕೆ ಬದಲಿಸಿದ ರೆಡ್ಡಿ, ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ಅಬಕಾರಿ ನೀತಿ ವಿಚಾರವಾಗಿ ಮಾತನಾಡಿದ್ದೇನೆ ಎಂದು ಹೇಳಿದರು.ಅವರು ಹೇಳಿದ ತಕ್ಷಣ ಜಾಮೀನು ಸಿಕ್ಕಿದೆ.ಆದರೆ ಹಣ ಎಲ್ಲಿದೆ? ಹಣದ ಹಾದಿ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

Next Article