ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹತಾಶರಾಗಿರುವ ʼಪೆನ್‌ಡ್ರೈವ್‌ʼ ಸ್ವಾಮಿ

12:55 PM Apr 25, 2024 IST | Samyukta Karnataka

ಬೆಂಗಳೂರು: ಕನ್ನಡಿಗರ ಮೇಲೆ ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳು ಕತ್ತಿ ಮಸೆಯುತ್ತಿವೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕಾಂಗ್ರೆಸ್‌ ಗ್ಯಾರಂಟಿಗಳ ಮುಂದೆ ಬಿಜೆಪಿ ಗ್ಯಾರಂಟಿಗಳು ಲೊಳಲೊಟ್ಟೆ ಎಂಬುದು ಎಲ್ಲರಿಗೂ ಮನದಟ್ಟಾಗಿದೆ. ಇದರಿಂದ ಹತಾಶರಾಗಿರುವ ʼಪೆನ್‌ಡ್ರೈವ್‌ʼ ಸ್ವಾಮಿ ಅವರು ಗ್ಯಾರಂಟಿಗಳನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡ್ತಿದ್ದಾರೆ. ಕನ್ನಡಿಗರ ಮೇಲೆ ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳು ಕತ್ತಿ ಮಸೆಯುತ್ತಿವೆ. ರಾಜ್ಯದ ಜನರ ಮೇಲೆ ಅದ್ಯಾಕೆ ಈ ಪರಿ ದ್ವೇಷವೋ ಗೊತ್ತಿಲ್ಲ. ಈಗಾಗಲೇ ಕುಮಾರಸ್ವಾಮಿ ಅವರು ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎನ್ನುವ ಮೂಲಕ ಅವರ ಕೀಳು ಮನಸ್ಥಿತಿಯನ್ನು ಬಹಿರಂಗಪಡಿಸಿದ್ದಾರೆ. ಎಸ್ಸಿ/ಎಸ್ಟಿ/ಒಬಿಸಿ/ರೈತರು/ಯುವಕರು/ ಮಹಿಳೆಯರು/ಬಡವರು ಗ್ಯಾರಂಟಿಗಳನ್ನು ಪಡೆಯುವ ಮೂಲಕ ಕರ್ನಾಟಕ ಸರ್ಕಾರದ ಪಾಲುದಾರರಾಗಿದ್ದಾರೆ. ರಾಜಕೀಯಕ್ಕಿಂತ ಜನರ ಕ್ಷೇಮವೇ ಮುಖ್ಯ ಎನ್ನುವ ಸಿದ್ಧಾಂತ ನಮ್ಮದು. ಎಲ್ಲದರಲ್ಲೂ ಕ್ಷುಲ್ಲಕ ರಾಜಕೀಯ ಮಾಡುವ ಮನಸ್ಥಿತಿ ಕುಮಾರಸ್ವಾಮಿ ಅವರದು ಎಂದಿದ್ದಾರೆ.

Next Article