ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹನುಮನನ್ನು ಕೆಣಕಿದ ರಾವಣನ ಪರಿಸ್ಥಿತಿ ಏನಾಯಿತು

01:50 PM Jan 03, 2024 IST | Samyukta Karnataka

ಬೆಂಗಳೂರು: ರಾಮಭಕ್ತ ಹನುಮನನ್ನು ಕೆಣಕಿದ ರಾವಣನ ಪರಿಸ್ಥಿತಿ ಏನಾಯಿತು ಎನ್ನುವುದು ಜಗತ್ತಿಗೇ ತಿಳಿದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಸಿ ಎನ್‌ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ ಬಂಧನ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿರುವ ಅವರು ರಾಮಭಕ್ತ ಹನುಮನನ್ನು ಕೆಣಕಿದ ರಾವಣನ ಪರಿಸ್ಥಿತಿ ಏನಾಯಿತು ಎನ್ನುವುದು ಜಗತ್ತಿಗೇ ತಿಳಿದಿದೆ, ಹನುಮನುದಿಸಿದ ನಾಡಿನ ರಾಮಭಕ್ತರನ್ನು ಕೆಣಕುತ್ತಿರುವ ಕಾಂಗ್ರೆಸ್‌ ಸರ್ಕಾರದ ಭವಿಷ್ಯ ಏನಾಗಬಹುದೆಂಬ ಅರಿವಿರಲಿ ಎಂದರು. ಜಗತ್ತಿನ ಸಮಸ್ತ ರಾಮಭಕ್ತರ ಐದು ಶತಮಾನಗಳ ಕನಸು ನನಸಾಗುತ್ತಿರುವ ಶುಭ ಸಂದರ್ಭದಲ್ಲಿ ಪವಿತ್ರ ರಾಮ ಮಂದಿರಕ್ಕಾಗಿ ಹೋರಾಟ ನಡೆಸಿದ ಕರಸೇವಕರ 30ಕ್ಕೂ ವರ್ಷ ಹಳೆಯ ಪ್ರಕರಣಗಳನ್ನು ಕೆದಕಿ ಶ್ರೀಕಾಂತ್ ಪೂಜಾರಿ ಸಹಿತ ರಾಮ ಭಕ್ತರನ್ನು ಬಂಧಿಸುತ್ತಿರುವ ಕಾಂಗ್ರೆಸ್‌ ಸರ್ಕಾರದ ಕ್ರಮವನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

Next Article