For the best experience, open
https://m.samyuktakarnataka.in
on your mobile browser.

ಹರಿಯಾಣ ಗೆಲುವಿಗೆ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

07:02 PM Oct 08, 2024 IST | Samyukta Karnataka
ಹರಿಯಾಣ ಗೆಲುವಿಗೆ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಕೊಪ್ಪಳ: ಹರಿಯಾಣದಲ್ಲಿ ಜಯಭೇರಿ ಮತ್ತು ಜಮ್ಮು-ಕಾಶ್ಮೀರದಲ್ಲಿ ಉತ್ತಮ ಸಾಧನೆಗಾಗಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಅಶೋಕ ವೃತ್ತದಲ್ಲಿ ಮಂಗಳವಾರ ವಿಜಯೋತ್ಸವ ಆಚರಿಸಿದರು.
ಪರಸ್ಪರರು ಸಿಹಿ ತಿನ್ನಿಸುವ ಮೂಲಕ ಸಂತಸ ವ್ಯಕ್ತಪಡಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಿಜೆಪಿ, ರಾಷ್ಟ್ರೀಯ ನಾಯಕರು, ರಾಜ್ಯನಾಯಕರ ಪರವಾಗಿ ಘೋಷಣೆಗಳನ್ನು ಕೂಗಿದರು.
ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಮೈನಳ್ಳಿ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ ಹೆಸರೂರು, ಗ್ರಾಮೀಣ ಘಟಕದ ಅಧ್ಯಕ್ಷ ಪ್ರದೀಪ ಹಿಟ್ನಾಳ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ ಹೊರತಟ್ನಾಳ, ನಗರಸಭೆ ಮಾಜಿ ಸದಸ್ಯ ಪ್ರಾಣೇಶ ಮಾದಿನೂರು, ಮಹಿಳಾ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷರಾದ ಮಧುರಾ ಕರಣಂ, ವಾಣಿಶ್ರೀ ಮಠದ, ಮಾಧ್ಯಮ ಪ್ರಮುಖ ಮಹೇಶ ಹಾದಿಮನಿ, ಭಾಗ್ಯನಗರ ಪಟ್ಟಣ ಪಂಚಾಯಿತಿ ಸದಸ್ಯ ವಾಸುದೇವ ಮೇಘರಾಜ, ನೀಲಕಂಠಪ್ಪ ಮೈಲಿ, ಉಮೇಶ ಕೊರ್ಡೇಕರ್ ಇದ್ದರು.

Tags :