ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಳೆಹುಬ್ಬಳ್ಳಿ ಪ್ರಕರಣ: ಬಿಜೆಪಿ ರಾಜಕೀಯ ಸರಿಯಲ್ಲ

06:41 PM Oct 14, 2024 IST | Samyukta Karnataka

ಹುಬ್ಬಳ್ಳಿ: ಹಳೆಹುಬ್ಬಳ್ಳಿ ಗಲಭೆಗೆ ಸಂಬಂಧಪಟ್ಟ ಪ್ರಕರಣಗಳನ್ನು ರಾಜ್ಯ ಸರ್ಕಾರವು ವಾಪಸ್ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ರಾಜಕೀಯ ಮಾಡುವುದು ಸರಿಯಲ್ಲ ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದ ಉಪಸಮಿತಿ, ಅಧಿಕಾರಿಗಳ ಸಮಿತಿ, ಸಚಿವ ಸಂಪುಟ ಸೇರಿ ಪ್ರಕರಣ ವಾಪಸ್ ಪಡೆಯುವ ನಿರ್ಧಾರ ಮಾಡಲಾಗಿದೆ. ಬಿಜೆಪಿಯವರು ಈ ರೀತಿ ಎಷ್ಟು ಪ್ರಕರಣಗಳನ್ನು ವಾಪಸ್ ಪಡೆದಿಲ್ಲ ಹೇಳಲಿ. ಹೀಗಾಗಿ, ಅನಗತ್ಯ ರಾಜಕೀಯ ಮಾಡುವುದನ್ನು ಬಿಜೆಪಿಯವರು ಬಿಡಲಿ ಎಂದು ಹೇಳಿದರು.
ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲು ಪ್ರಕರಣ ವಾಪಸ್ ಪಡೆದಿದೆ ಎಂಬ ಬಿಜೆಪಿ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಲ್ಪಸಂಖ್ಯಾತ ಕಲ್ಯಾಣ ಆಗಬೇಕು ಎಂದು ಬಯಸುವುದು ಗುನ್ನೆನಾ? ನಮಗೆಲ್ಲರೂ ಭಾರತೀಯರೆ. ಸಮಾಜ ಒಡೆಯುವ ಇಂತಹ ಮಾತುಗಳಿಂದ ರಾಷ್ಟ್ರ ಕಟ್ಟಲು ಆಗುವುದಿಲ್ಲ ಎಂದು ಕುಟುಕಿದರು.

Tags :
congressGadagh k patilhubliold hubli
Next Article