ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಳ್ಳದಾಟಲು ರೈತರ ಪರದಾಟ: ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರು ಒತ್ತಾಯ

02:19 PM Oct 05, 2024 IST | Samyukta Karnataka

ಬಸವಕಲ್ಯಾಣ (ಬೀದರ್ ಜಿಲ್ಲೆ) : ತಾಲೂಕಿನ ಮುಡುಬಿ ಹೋಬಳಿ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದ್ದು, ತುಂಬಿ ಹರಿಯುತ್ತಿರುವ ಹಳ್ಳದಾಟಲು ಸಾಧ್ಯವಾಗದೆ ರೈತರು ಪರದಾಡಿದ ಪ್ರಸಂಗ ಏಕಲೂರು ವಾಡಿ ಗ್ರಾಮದ ವ್ಯಾಪ್ತಿಯಲ್ಲಿ ಜರುಗಿದೆ. ಸೋಯಾಬೀನ್ ರಾಶಿಗೆಂದು ರೈತರು ಜಮೀನುಗಳಿಗೆ ತೆರಳಿದರು, ಈ ವೇಳೆ ಸಂಜೆ 4ರ ಸುಮಾರಿಗೆ ಇದ್ದಕ್ಕಿದ್ದಂತೆ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದೆ. ಮಳೆಯಿಂದಾಗಿ ಭರ್ತಿಯಾದ ಚಕ್ ಡ್ಯಾಮ್ ಒಂದು ತುಂಬಿ ಹರಿದಿದ್ದು, ಹೀಗಾಗಿ ರಭಸವಾಗಿ ಹರಿಯುತ್ತಿರುವ ಹಳ್ಳದ ನೀರು ದಾಟಲು ಸಾಧ್ಯವಾಗದೆ ರೈತರು ಪರದಾಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿದ ಗ್ರಾಮದ ಪ್ರಮುಖರಾದ ನಾಮದೇವ ಚಿಂತಾಲೆ, ಸುನಿಲ್ ಖೋಲೆ, ಪವನ್ ಚಿಂತಾಲೆ, ವಾಮನರಾವ್ ಜಮಾದಾರ್, ಓಂಕಾರ್ ಚಿಂತಾಲೆ ಸೇರಿದಂತೆ ಪ್ರಮುಖರು ಹಳ್ಳದ ಆಚೆ ಸಿಲುಕಿದ ಮಹಿಳೆಯರು ಸೇರಿದಂತೆ ಸುಮಾರು 20ಕ್ಕೂ ಅಧಿಕ ಜನ ರೈತರನ್ನು ಹಗ್ಗದ ಸಹಾಯದೊಂದಿಗೆ ಹರಸಹಾಸ ಪಟ್ಟು ಹಳ್ಳದಾಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಾರಿ ಪ್ರಮಾಣದಲ್ಲಿ ಮಳೆ ಆದಾಗ ಈ ಸ್ಥಳದಲ್ಲಿ ರೈತರು ಸಮಸ್ಯೆ ಎದುರಿಸುವಂತಾಗಿದೆ, ಸಂಬಂಧಿತ ಇಲಾಖೆ ಅಧಿಕಾರಿಗಳು ಈ ಸ್ಥಳದಲ್ಲಿ ಸೇತುವೆ ನಿರ್ಮಾಣ ಮಾಡುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Next Article