For the best experience, open
https://m.samyuktakarnataka.in
on your mobile browser.

ಹಾಲಿನ ದರ ಹೆಚ್ಚಳದ ಸುಳಿವು ನೀಡಿದ ಸಿಎಂ

03:33 PM Sep 13, 2024 IST | Samyukta Karnataka
ಹಾಲಿನ ದರ ಹೆಚ್ಚಳದ ಸುಳಿವು ನೀಡಿದ ಸಿಎಂ

ಬೆಂಗಳೂರು: ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಮನಗರದ ಮಾಗಡಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿರುವ ಅವರು ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಸುಳಿವನ್ನು ನೀಡಿದ್ದು ಹಾಲಿನ ದರ ಏರಿಕೆ ಮಾಡುತ್ತೇವೆ. ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗಬೇಕು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದರು.

Tags :