ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹೀಗೆ ಬಂದು…. ಹಾಗೇ ಹೋದರು ಪ್ರಿಯಾಂಕ ಗಾಂಧಿ!

09:49 PM May 04, 2024 IST | Samyukta Karnataka

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಹಿಳಾ ನಾಯಕಿ ಪ್ರಿಯಾಂಕ ಗಾಂಧಿ ಅವರು ಗದುಗಿನಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳದೇ ಅಲ್ಲಿಂದ ಅವಸರದಲ್ಲಿ ಹೆಲಿಕಾಪ್ಟರ್‌ನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ದೌಡಾಯಿಸಿ ವಿಶೇಷ ವಿಮಾನದಲ್ಲಿ ರಾಯಬರೇಲಿ ಕ್ಷೇತ್ರಕ್ಕೆ ತೆರಳಿದ ಘಟನೆ ಶನಿವಾರ ಸಂಜೆ ನಡೆದಿದೆ.
ಮಧ್ಯಾಹ್ನ ೨ ಗಂಟೆಗೆ ದಾವಣಗೆರೆ ಕ್ಷೇತ್ರದಲ್ಲಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾಗಿಯಾದ ಅವರು ಬಳಿಕ ಗದುಗಿನಲ್ಲಿ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಬೇಕಿತ್ತು. ಆದರೆ, ಅದ್ಯಾವ ಕಾರಣಕ್ಕೊ ಏನೊ ನೆರೆದ ಜನಸ್ತೋಮಕ್ಕೆ ಕೈ ಬೀಸಿ ಹೆಲಿಕಾಪ್ಟರ್‌ನಲ್ಲಿ ಹುಬ್ಬಳ್ಳಿಯತ್ತ ನಿರ್ಗಮಿಸಿದರೆನ್ನಲಾಗಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಇಳಿಯುತ್ತಿದ್ದಂತೆಯೇ ಅವರಿಗಾಗಿ ಸಿದ್ಧವಾಗಿದ್ದ ವಿಶೇಷ ವಿಮಾನದಲ್ಲಿ ರಾಯಬರೇಲಿಗೆ ತೆರಳಿದರು. ಯಾಕೆ ಅವಸರದಲ್ಲಿ ತೆರಳಿದರು ಎಂಬುದು ತಿಳಿದಿಲ್ಲ. ಪಕ್ಷದ ಸ್ಥಳೀಯ ಮುಖಂಡರಿಗೂ ತಿಳಿದಿಲ್ಲ. ಮಹತ್ವದ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲೇಬೇಕಾದ ಒತ್ತಡದಲ್ಲಿ ತೆರಳಿರುವ ಸಾಧ್ಯತೆ ಇದೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದರು.

Next Article