For the best experience, open
https://m.samyuktakarnataka.in
on your mobile browser.

ಹು-ಧಾ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ

02:01 PM May 20, 2024 IST | Samyukta Karnataka
ಹು ಧಾ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ನೂತನ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕುಶಾಲ್ ಚೌಕ್ಸಿ ೨೦೧೮ ನೇ ಬ್ಯಾಚಿನ ಕರ್ನಾಟಕ ಕೇಡರ್ ಅಧಿಕಾರಿಯಾಗಿದ್ದಾರೆ. ಸದ್ಯ ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿದ್ದರು. ಡಿಸಿಪಿ ಎಂ. ರಾಜೀವ್ ಅವರ ಸಸ್ಪೆಂಡ್ ಆದೇಶವಾದ ಹಿನ್ನೆಲೆ ಕುಶಾಲ್ ಅವರನ್ನು ರಾಜ್ಯ ಸರ್ಕಾರ ಸೋಮವಾರ ನೇಮಕ ಮಾಡಿ ಆದೇಶ ಹೊರಡಿಸಿದೆ.