ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹೆಬಸೂರು ಬಳಿ ಅಪಘಾತ: ಮತ್ತೋರ್ವ ಮೃತ

08:38 PM Aug 27, 2024 IST | Samyukta Karnataka

ಕೊಪ್ಪಳ: ತಾಲೂಕಿನ ಮಂಗಳಾಪುರ ಗ್ರಾಮದ ಕುಟುಂಬದ ಮೂವರು ಹುಬ್ಬಳ್ಳಿಯ ಹೆಬಸೂರು ಬಳಿಯಲ್ಲಿ ಈಚೆಗೆ ಓಮಿನಿ-ಲಾರಿ ಅಪಘಾತದಲ್ಲಿ ಗಾಯಾಳುವಾಗಿದ್ದ ಮತ್ತೋರ್ವ ವ್ಯಕ್ತಿ ಮಂಗಳವಾರ ಮೃತಪಟ್ಟಿದ್ದಾನೆ.
ಮೃತನನ್ನು ಇಮಾಮವಲಿ ಸಾಬ್ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಈ ಮೂಲಕ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದ್ದು, ಇನ್ನಿಬ್ಬರು ಗಾಯಾಳಿಗೆ ಚಿಕಿತ್ಸೆ ಮುಂದುವರೆದಿದೆ.
ಜಾಫರ್ ಸಾಬ್‌ಗೆ ಪಾರ್ಶ್ವವಾಯು ಕಾಯಿಲೆಗೆ ಸಂಬಂಧಿಸಿದ ಚಿಕಿತ್ಸೆ ಕೊಡಿಸಲು ಉತ್ತರ ಕನ್ನಡ ಜಿಲ್ಲೆಯ ಹಲಗಾಕ್ಕೆ ಓಮಿನಿಯಲ್ಲಿ ೬ ಜನ ಕುಟುಂಬದವರು ತೆರಳಿದ್ದರು. ಚಿಕಿತ್ಸೆ ಕೊಡಿಸಿ, ಮರಳಿ ಕೊಪ್ಪಳದ ಮಂಗಳಾಪುರ ಗ್ರಾಮಕ್ಕೆ ಮರಳುತ್ತಿರುವಾಗ ಹುಬ್ಬಳ್ಳಿಯ ಹೆಬಸೂರಿನಲ್ಲಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದರು. ಈಗ ಮತ್ತೋರ್ವ ಮೃತಪಟ್ಟಿದ್ದಾರೆ.

Next Article