ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

೨೬, ೨೭ರಂದು ಉದ್ಯೋಗ ಮೇಳ

12:15 AM Feb 22, 2024 IST | Samyukta Karnataka

ಬೆಂಗಳೂರು: ಯುವ ಸಮೃದ್ಧಿ ಸಮ್ಮೇಳನದ ರಾಜ್ಯಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಅಭ್ಯರ್ಥಿಗಳ ಹೆಸರು ನೋಂದಣಿ ಹಾಗೂ ಪಾಲ್ಗೊಳ್ಳುವ ಕುರಿತು ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.
ಅರಮನೆ ಮೈದಾನದಲ್ಲಿ ಫೆ. ೨೬, ೨೭ರಂದು ರಾಜ್ಯಮಟ್ಟದ ಉದ್ಯೋಗ ಮೇಳವನ್ನು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಆಯೋಜಿಸಲು ತಿರ್ಮಾನಿಸಲಾಗಿದೆ. ಬೃಹತ್ ಉದ್ಯೋಗ ಮೇಳದಲ್ಲಿ ರಾಜ್ಯದ ಯುವ ಜನತೆಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಉಪಯುಕ್ತವಾಗುವಂತೆ ಮತ್ತು ಆಸಕ್ತ ಯುವಜನತೆಯು ಸ್ವಯಂ ಉದ್ಯೋಗಿಗಳಾಗಲು ಹಾಗೂ ಸ್ವಾವಲಂಬಿಗಳಾಗಲು ಅರಿವು ಮೂಡಿಸಿ, ಪ್ರೇರೇಪಿಸುವ ಉದ್ದೇಶವನ್ನು ಹೊಂದಿದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರು, ಪ್ಲೇಸ್‌ಮೆಂಟ್ ಅಧಿಕಾರಿಗಳು ಹಾಗೂ ಪದವಿ ಮುಗಿಸಿ ಹೊರಗುಳಿದಿರುವ ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳಲು ಸೂಚಿಸಲಾಗಿದೆ.

Next Article