ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

38ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಅದ್ಧೂರಿ ಮೆರವಣಿಗೆಗೆ ಚಾಲನೆ

04:09 PM Feb 03, 2024 IST | Samyukta Karnataka

ದಾವಣಗೆರೆ: ನಗರದಲ್ಲಿ ಎರಡು ದಿನ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಅಂಗವಾಗಿ ದಾವಣಗೆರೆ ನಗರದ ಜಯದೇವ ವೃತ್ತದಿಂದ ಮೆರವಣಿಗೆಗೆ ಮಹಾನಗರ ಪಾಲಿಕೆ ಮಹಾಪೌರ ವಿನಾಯಕ್ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ಹುಬ್ಬಳ್ಳಿಯ ಸಿದ್ಧರೂಢ ಸಂಘದ 10 ಜನ ಕಲಾವಿದರು ಜಗ್ಗಲಿಗೆ, ನ್ಯಾಮತಿಯ ರಾಜ ವೀರಮದಕರಿ ದೊಳ್ಳಿನ ಸಂಘದ 12 ಜನರು ಪುರುಷರ ಡೊಳ್ಳು ಕುಣಿತ, ಹರಿಹರ ತಾಲೂಕಿನ ಗುತ್ತೂರಿನ ಕಲಾಶ್ರೀ ಸಂಘದ ವೀರೇಶ್ ಕುಮಾರ್ ನೇತೃತ್ವದಲ್ಲಿ 13 ಜನರ ಹಗಲುವೇಷ ತಂಡದಿಂದ ರಾಮಾಯಣ, ಸಾಗರದ ಹೆಗ್ಗೋಡಿನ ಸಿಗಂಧೂರು ಚೌಡೇಶ್ವರಿ ಮಹಿಳಾ ದೊಳ್ಳು ಕಲಾ ತಂಡದ ಅಧ್ಯಕ್ಷರಾದ ಶಾಂತ, ಶಶಿಕಲಾ, ಪದ್ಮಶ್ರೀ, ದಿವ್ಯ, ಪವಿತ್ರ, ಪೂಜಾ, ವೈಶಾಲಿ, ಲಕ್ಷ್ಮೀ ಅವರ ಮಹಿಳಾ ತಂಡದಿಂದ ಮಹಿಳಾ ದೊಳ್ಳುಕುಣಿತ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ದೊಡ್ಡಚಲ್ಲೂರು ಗ್ರಾಮದ ಬಯಲು ಆಂಜನೇಯ ಸ್ವಾಮಿ ಸಾಂಸ್ಕೃತಿಕ ಕಲಾತಂಡದ 10 ಜನ ಯುವಕರು ಗರಡಿ ಬೊಂಬೆ ಕುಣಿತ ಮೆರವಣಿಗೆಗೆ ಮೆರಗು ತಂದಿತು.

ಮೆರವಣಿಗೆಯಲ್ಲಿ ಮಾಧ್ಯಮ ವೃಕ್ಷವನ್ನು ನಿರ್ಮಿಸಿದ್ದ ವಿಶೇಷವಾಗಿತ್ತು. ದೃಶ್ಯಕಲಾ ಮಹಾ ವಿದ್ಯಾಲಯದ ಬೋಧನ ಸಹಾಯಕರಾದ ಪ್ರಮೋದ್ ಕೆವಿ, ನವೀನ್ ಕುಮಾರ್ ಎ, ವಿದ್ಯಾರ್ಥಿಗಳಾದ ದರ್ಶನ್, ವಿನೋದ್, ಮದನ್ ಅವರು ಸುದ್ದಿ ಪತ್ರಿಕೆಗಳ ಮತ್ತು ದೃಶ್ಯ ಮಾಧ್ಯಮಗಳ ನಾಮ ಫಲಕಗಳನ್ನು ಹಾಕಿರುವ ವೃತ್ತವನ್ನು ಎತ್ತಿನ ಬಂಡಿಯಲ್ಲಿ ನಿರ್ಮಾಣ ಮಾಡಿದ್ದು ಗಮನ ಸೆಳೆಯಿತು.

ಈ ಸಂದರ್ಭದಲ್ಲಿ ಕಾರ್ಯನಿರತ‌ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತೌಡೂರು, ಪಾಲಿಕೆ ಆಯುಕ್ತರಾದ ರೇಣುಕಾ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಇಎಂ, ಜಿಲ್ಲಾ ವರದಿಗಾರರ ಕೂಡ ಅಧ್ಯಕ್ಷ ಏಕಾಂತಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ‌ನಿರ್ದೇಶಕ ರವಿಚಂದ್ರ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ವಾಮದೇಪ್ಪ, ಕಸಾಪ ತಾಾಲ್ಲೂಕು ಅಧ್ಯಕ್ಷರಾದ ಇತರರು ಭಾಗವಹಿಸಿದ್ದರು.

Next Article